<p><strong>ಬೆಳಗಾವಿ:</strong> ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಿಂದ ಸ್ನಾತಕ ಪದವಿ ಕೋರ್ಸ್ಗಳ (ಬಿ.ಇ, ಬಿ.ಆರ್ಕ್., ಬಿ.ಪ್ಲಾನ್) ಮೊದಲ ಸೆಮಿಸ್ಟರ್ ಪರೀಕ್ಷೆಗಳನ್ನು ಶೈಕ್ಷಣಿಕ ಅಗತ್ಯತೆಯ ದೃಷ್ಟಿಯಿಂದಾಗಿ ಪೂರ್ಣಗೊಳಿಸಲೇಬೇಕಿದೆ. ಈಗಾಗಲೇ ಪ್ರಕಟಿಸಿರುವ ಅಧಿಸೂಚನೆಯಲ್ಲಿನ ವೇಳಾಪಟ್ಟಿಯಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ನಡೆಸಲಾಗುವುದು’ ಎಂದು ಕುಲಸಚಿವ ಪ್ರೊ.ಎ.ಎಸ್. ದೇಶಪಾಂಡೆ ತಿಳಿಸಿದ್ದಾರೆ.</p>.<p>‘ಕೋವಿಡ್–19 ಸಾಂಕ್ರಾಮಿಕದ ಕಾರಣದಿಂದಾಗಿ ಅನಿವಾರ್ಯವಾಗಿ ಯಾರಾದರೂ ತಪ್ಪಿಸಿಕೊಂಡರೆ, ಅಂಥವರನ್ನು 2ನೇ ಸೆಮಿಸ್ಟರ್ಗೆ ಕಳುಹಿಸಲಾಗುವುದು. ಅವರು ಬಾಕಿ ಉಳಿಸಿಕೊಂಡಿರುವ ವಿಷಯದ ಪರೀಕ್ಷೆಯನ್ನುಮುಂಬರುವ ಸೆಮಿಸ್ಟರ್ ಪರೀಕ್ಷೆ ಜೊತೆ ತೆಗೆದುಕೊಳ್ಳಬೇಕಾಗುತ್ತದೆ. ಅದನ್ನು ಮೊದಲ ಪ್ರಯತ್ನವೆಂದು ಪರಿಗಣಿಸಲಾಗುವುದು. ಈ ಅವಕಾಶವನ್ನು ಬಿ.ಇ, ಬಿ.ಆರ್ಕ್., ಬಿ.ಪ್ಲಾನ್ ಕೋರ್ಸ್ನ ರೆಗ್ಯುಲರ್ ವಿದ್ಯಾರ್ಥಿಗಳಿಗೆ ಮಾತ್ರವೇ ಕಲ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಈಗಾಗಲೇ 2 ವಿಷಯಗಳ ಪರೀಕ್ಷೆಗಳು ಮುಗಿದಿದ್ದು, ಶೇ 98ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಇನ್ನು 4 ವಿಷಯಗಳು ಉಳಿದಿವೆ. ಪರೀಕ್ಷೆ ಮುಗಿಸುವುದರಲ್ಲಿ ವಿಳಂಬವಾದರೆ ಇಡೀ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಬಹುದು ಮತ್ತು ಈಗಾಗಲೇ 4 ತಿಂಗಳುಗಳು ವಿಳಂಬ ಆಗಿರುವುದರಿಂದ ಮತ್ತೆ ಮುಂದೂಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗುತ್ತದೆ. ಹೀಗಾಗಿ, ಪರೀಕ್ಷೆಯನ್ನು ಗಂಭಿರವಾಗಿ ಪರಿಗಣಿಸಬೇಕು. ಉತ್ತಮವಾಗಿ ಅಭ್ಯಾಸ ಮಾಡಿ ಎದುರಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕು’ ಎಂದು ಸಲಹೆ ನೀಡಿದ್ದಾರೆ.</p>.<p>‘ಕೋವಿಡ್ ಲಕ್ಷಣವಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡುವಂತೆ ಎಲ್ಲ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಿಂದ ಸ್ನಾತಕ ಪದವಿ ಕೋರ್ಸ್ಗಳ (ಬಿ.ಇ, ಬಿ.ಆರ್ಕ್., ಬಿ.ಪ್ಲಾನ್) ಮೊದಲ ಸೆಮಿಸ್ಟರ್ ಪರೀಕ್ಷೆಗಳನ್ನು ಶೈಕ್ಷಣಿಕ ಅಗತ್ಯತೆಯ ದೃಷ್ಟಿಯಿಂದಾಗಿ ಪೂರ್ಣಗೊಳಿಸಲೇಬೇಕಿದೆ. ಈಗಾಗಲೇ ಪ್ರಕಟಿಸಿರುವ ಅಧಿಸೂಚನೆಯಲ್ಲಿನ ವೇಳಾಪಟ್ಟಿಯಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ನಡೆಸಲಾಗುವುದು’ ಎಂದು ಕುಲಸಚಿವ ಪ್ರೊ.ಎ.ಎಸ್. ದೇಶಪಾಂಡೆ ತಿಳಿಸಿದ್ದಾರೆ.</p>.<p>‘ಕೋವಿಡ್–19 ಸಾಂಕ್ರಾಮಿಕದ ಕಾರಣದಿಂದಾಗಿ ಅನಿವಾರ್ಯವಾಗಿ ಯಾರಾದರೂ ತಪ್ಪಿಸಿಕೊಂಡರೆ, ಅಂಥವರನ್ನು 2ನೇ ಸೆಮಿಸ್ಟರ್ಗೆ ಕಳುಹಿಸಲಾಗುವುದು. ಅವರು ಬಾಕಿ ಉಳಿಸಿಕೊಂಡಿರುವ ವಿಷಯದ ಪರೀಕ್ಷೆಯನ್ನುಮುಂಬರುವ ಸೆಮಿಸ್ಟರ್ ಪರೀಕ್ಷೆ ಜೊತೆ ತೆಗೆದುಕೊಳ್ಳಬೇಕಾಗುತ್ತದೆ. ಅದನ್ನು ಮೊದಲ ಪ್ರಯತ್ನವೆಂದು ಪರಿಗಣಿಸಲಾಗುವುದು. ಈ ಅವಕಾಶವನ್ನು ಬಿ.ಇ, ಬಿ.ಆರ್ಕ್., ಬಿ.ಪ್ಲಾನ್ ಕೋರ್ಸ್ನ ರೆಗ್ಯುಲರ್ ವಿದ್ಯಾರ್ಥಿಗಳಿಗೆ ಮಾತ್ರವೇ ಕಲ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>‘ಈಗಾಗಲೇ 2 ವಿಷಯಗಳ ಪರೀಕ್ಷೆಗಳು ಮುಗಿದಿದ್ದು, ಶೇ 98ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಇನ್ನು 4 ವಿಷಯಗಳು ಉಳಿದಿವೆ. ಪರೀಕ್ಷೆ ಮುಗಿಸುವುದರಲ್ಲಿ ವಿಳಂಬವಾದರೆ ಇಡೀ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಬಹುದು ಮತ್ತು ಈಗಾಗಲೇ 4 ತಿಂಗಳುಗಳು ವಿಳಂಬ ಆಗಿರುವುದರಿಂದ ಮತ್ತೆ ಮುಂದೂಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗುತ್ತದೆ. ಹೀಗಾಗಿ, ಪರೀಕ್ಷೆಯನ್ನು ಗಂಭಿರವಾಗಿ ಪರಿಗಣಿಸಬೇಕು. ಉತ್ತಮವಾಗಿ ಅಭ್ಯಾಸ ಮಾಡಿ ಎದುರಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕು’ ಎಂದು ಸಲಹೆ ನೀಡಿದ್ದಾರೆ.</p>.<p>‘ಕೋವಿಡ್ ಲಕ್ಷಣವಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡುವಂತೆ ಎಲ್ಲ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>