ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೌಕ್ತೆ ಪರಿಣಾಮ ನಿರಂತರ ಮಳೆ: ಮನೆಯ ಗೋಡೆ ಕುಸಿದು ಅಜ್ಜಿ-ಮೊಮ್ಮಗ ಸಾವು

Last Updated 16 ಮೇ 2021, 9:53 IST
ಅಕ್ಷರ ಗಾತ್ರ

ಬೆಳಗಾವಿ: 'ತೌಕ್ತೆ' ಚಂಡಮಾರುತದ ಪರಿಣಾಮ ಶನಿವಾರ ತಡರಾತ್ರಿಯಿಂದ ಜೋರು ಗಾಳಿ ಹಾಗೂ ಮಳೆಯಿಂದ ಮನೆಯ ಗೋಡೆ ಕುಸಿದಿದ್ದರಿಂದ ಅದರಲ್ಲಿ ಸಿಲುಕಿ ಅಜ್ಜಿ- ಮೊಮ್ಮಗ ಸಾವಿಗೀಡಾದ ಘಟನೆ ಖಾನಾಪುರ ತಾಲ್ಲೂಕಿನ ಇಟಗಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ದೊಡ್ಡವ್ವ ರುದ್ರಪ್ಪ ಪಟ್ಟೇದ (55) ಮತ್ತು ಅವರ ಮೊಮ್ಮಗ ಅಭಿಷೇಕ ಸುರೇಶ ಪಟ್ಟೇದ (3) ಮೃತರು.

ದೊಡ್ಡವ್ವ ಅವರ ಪುತ್ರ ಸುರೇಶ ಹಾಗೂ ಸೊಸೆ ಮಂಜುಳಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಅದೇ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT