<p><strong>ಬೆಳಗಾವಿ: </strong>ಜಿಲ್ಲೆಯ ಬಹುತೇಕ ಕೆರೆ–ಕಟ್ಟೆಗಳಲ್ಲಿ ನೀರು ತುಂಬಿರುವುದರಿಂದಾಗಿ, ಮುಂಬರುವ ಬೇಸಿಗೆಯ ಸಂದರ್ಭದಲ್ಲಿ ಜನ– ಜಾನುವಾರುಗಳಿಗೆ ‘ನೀರ ನೆಮ್ಮದಿ’ ದೊರೆಯುವ ಸಾಧ್ಯತೆ ಇದೆ.</p>.<p>ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 278 ಕೆರೆಗಳಿವೆ. ಇವುಗಳ ಗರಿಷ್ಠ ನೀರಿನ ಸಾಮರ್ಥ್ಯ 3308 ಎಂಸಿಎಫ್ಟಿ (ಮಿಲಿಯನ್ ಕ್ಯುಬಿಕ್ ಫೀಟ್) ಇದೆ. 30,433 ಹೆಕ್ಟೇರ್ಗಳಷ್ಟು ಅಚ್ಚುಕಟ್ಟು ಪ್ರದೇಶ ಹೊಂದಿವೆ. ಈ ಪೈಕಿ 127 ಕೆರೆಗಳು ಶೇ 51ರಿಂದ ಶೇ 99ರಷ್ಟು ಭರ್ತಿಯಾಗಿವೆ. 67 ಕೆರೆಗಳಲ್ಲಿ ಶೇ 31ರಿಂದ ಶೇ 50 ಮತ್ತು 50 ಕೆರೆಗಳಲ್ಲಿ ಶೇ 30ರವರೆಗೆ ನೀರಿದೆ. 34 ಕೆರೆಗಳು ಖಾಲಿ ಇವೆ.</p>.<p>ಕಳೆದ ವರ್ಷದ ಇದೇ ಅವಧಿಯಲ್ಲಿ ಬಹುತೇಕ ಕೆರೆಗಳಲ್ಲಿ ನೀರಿನ ಪ್ರಮಾಣ ಚಿಂತಾಜನಕ ಸ್ಥಿತಿಯಲ್ಲಿತ್ತು. ಆದರೆ, ಆಗಸ್ಟ್ನಿಂದ ಸುರಿದ ಭಾರಿ ಮಳೆಯಿಂದಾಗಿ ಜಲ ಮೂಲಗಳು ಜೀವ ಜಲದಿಂದ ನಳನಳಿಸುತ್ತಿವೆ. ಬೇಸಿಗೆಯ ದಿನಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲೂ ಕೆರೆಗಳಲ್ಲಿ ನೀರು ಲಭ್ಯವಿರುವುದು ಆಶಾದಾಯಕ ಎನಿಸಿದೆ.</p>.<p class="Subhead"><strong>34ರಲ್ಲಿ ನೀರಿಲ್ಲ:</strong>ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ 34 ಕೆರೆಗಳಲ್ಲಿ ನೀರಿಲ್ಲ. ಹೋದ ವರ್ಷ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಮಳೆಯಾದರೂ ಇಷ್ಟು ಪ್ರಮಾಣದ ಕೆರೆಗಳು ತುಂಬಿಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ. ಆ ಭಾಗದಲ್ಲಿ ನೀರನ್ನು ಹಿಡಿದಿಡುವುದಕ್ಕೆ ವ್ಯವಸ್ಥೆ ಇಲ್ಲದಿರುವುದು ಹಾಗೂ ಮಳೆಯ ನೀರು ಹರಿದು ಕೆರೆಯನ್ನು ಸೇರಲು ಇದ್ದ ಸಾಂಪ್ರದಾಯಿಕ ಕಾಲುವೆಗಳು ಒತ್ತುವರಿ ಮೊದಲಾದ ಸಮಸ್ಯೆಗಳಿಂದಾಗಿ ಮುಚ್ಚಿ ಹೋಗಿರುವುದು ಇದಕ್ಕೆ ಕಾರಣವಾಗಿದೆ. ಹೀಗಾಗಿ, ಮಳೆಯ ನೀರು ವ್ಯರ್ಥವಾಗಿ ಹರಿದು ಹೋಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದರಿಂದಾಗಿ ಆ ಭಾಗದಲ್ಲಿ ನೀರಿಗೆ ತೊಂದರೆಯಾಗಬಹುದು ಎಂದು ಅಂದಾಜಿಸಲಾಗಿದೆ.</p>.<p>‘ಹಿಂದಿನ ವರ್ಷ ಈ ಅವಧಿಯಲ್ಲಿ ಬಹಳಷ್ಟು ಕೆರೆಗಳಲ್ಲಿ ನೀರಿರಲಿಲ್ಲ. ಆದರೆ, ಹೋದ ವರ್ಷ ಉತ್ತಮ ಮಳೆಯಿಂದಾಗಿ ಈಗ ಬಹಳಷ್ಟು ಕೆರೆಗಳಲ್ಲಿ ನೀರು ಲಭ್ಯವಿದೆ. ಇದರಿಂದ ಆ ಭಾಗದ ಜನರಿಗೆ ಅನುಕೂಲವಾಗಲಿದೆ. ಕೃಷಿ ಚಟುವಟಿಕೆಗಳಿಗೂ ನೀರು ಲಭ್ಯವಾಗಲಿದೆ. ಕಡಿಮೆ ಮಳೆಯಾದ ಪ್ರದೇಶಗಳ ಕೆರೆಗಳಲ್ಲಿ ನೀರು ತುಂಬಿಲ್ಲ. ಕಳೆದ ವರ್ಷಗಳಿಗೆ ಹೋಲಿಸಿದರೆ ಬೈಲಹೊಂಗಲದಲ್ಲಿ 30 ಕೆರೆಗಳಲ್ಲಿ ಶೇ 51ರಿಂದ ಶೇ 99ರಷ್ಟು ನೀರಿರುವುದು ವಿಶೇಷವಾಗಿದೆ. ಕೆರೆಗಳು ತುಂಬಿರುವುದು ಆ ಭಾಗದಲ್ಲಿ ಅಂತರ್ಜಲ ಮಟ್ಟ ವೃದ್ಧಿಸುವುದಕ್ಕೂ ಪೂರಕವಾಗಿದೆ’ ಎಂದು ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಸಿ. ಸತೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಇಲಾಖೆಯಿಂದ ಕೆರೆಗಳನ್ನು ತುಂಬಿಸುವ ಕಾಮಗಾರಿಯನ್ನೂ ಕೈಗೊಳ್ಳಲಾಗಿದೆ. ವಿವಿಧೆಡೆ 19 ಕೆರೆಗಳಿಗೆ ಸಮೀಪದ ನದಿಗಳಿಂದ ನೀರು ಹರಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಜಿಲ್ಲೆಯ ಬಹುತೇಕ ಕೆರೆ–ಕಟ್ಟೆಗಳಲ್ಲಿ ನೀರು ತುಂಬಿರುವುದರಿಂದಾಗಿ, ಮುಂಬರುವ ಬೇಸಿಗೆಯ ಸಂದರ್ಭದಲ್ಲಿ ಜನ– ಜಾನುವಾರುಗಳಿಗೆ ‘ನೀರ ನೆಮ್ಮದಿ’ ದೊರೆಯುವ ಸಾಧ್ಯತೆ ಇದೆ.</p>.<p>ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 278 ಕೆರೆಗಳಿವೆ. ಇವುಗಳ ಗರಿಷ್ಠ ನೀರಿನ ಸಾಮರ್ಥ್ಯ 3308 ಎಂಸಿಎಫ್ಟಿ (ಮಿಲಿಯನ್ ಕ್ಯುಬಿಕ್ ಫೀಟ್) ಇದೆ. 30,433 ಹೆಕ್ಟೇರ್ಗಳಷ್ಟು ಅಚ್ಚುಕಟ್ಟು ಪ್ರದೇಶ ಹೊಂದಿವೆ. ಈ ಪೈಕಿ 127 ಕೆರೆಗಳು ಶೇ 51ರಿಂದ ಶೇ 99ರಷ್ಟು ಭರ್ತಿಯಾಗಿವೆ. 67 ಕೆರೆಗಳಲ್ಲಿ ಶೇ 31ರಿಂದ ಶೇ 50 ಮತ್ತು 50 ಕೆರೆಗಳಲ್ಲಿ ಶೇ 30ರವರೆಗೆ ನೀರಿದೆ. 34 ಕೆರೆಗಳು ಖಾಲಿ ಇವೆ.</p>.<p>ಕಳೆದ ವರ್ಷದ ಇದೇ ಅವಧಿಯಲ್ಲಿ ಬಹುತೇಕ ಕೆರೆಗಳಲ್ಲಿ ನೀರಿನ ಪ್ರಮಾಣ ಚಿಂತಾಜನಕ ಸ್ಥಿತಿಯಲ್ಲಿತ್ತು. ಆದರೆ, ಆಗಸ್ಟ್ನಿಂದ ಸುರಿದ ಭಾರಿ ಮಳೆಯಿಂದಾಗಿ ಜಲ ಮೂಲಗಳು ಜೀವ ಜಲದಿಂದ ನಳನಳಿಸುತ್ತಿವೆ. ಬೇಸಿಗೆಯ ದಿನಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲೂ ಕೆರೆಗಳಲ್ಲಿ ನೀರು ಲಭ್ಯವಿರುವುದು ಆಶಾದಾಯಕ ಎನಿಸಿದೆ.</p>.<p class="Subhead"><strong>34ರಲ್ಲಿ ನೀರಿಲ್ಲ:</strong>ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ 34 ಕೆರೆಗಳಲ್ಲಿ ನೀರಿಲ್ಲ. ಹೋದ ವರ್ಷ ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಮಳೆಯಾದರೂ ಇಷ್ಟು ಪ್ರಮಾಣದ ಕೆರೆಗಳು ತುಂಬಿಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ. ಆ ಭಾಗದಲ್ಲಿ ನೀರನ್ನು ಹಿಡಿದಿಡುವುದಕ್ಕೆ ವ್ಯವಸ್ಥೆ ಇಲ್ಲದಿರುವುದು ಹಾಗೂ ಮಳೆಯ ನೀರು ಹರಿದು ಕೆರೆಯನ್ನು ಸೇರಲು ಇದ್ದ ಸಾಂಪ್ರದಾಯಿಕ ಕಾಲುವೆಗಳು ಒತ್ತುವರಿ ಮೊದಲಾದ ಸಮಸ್ಯೆಗಳಿಂದಾಗಿ ಮುಚ್ಚಿ ಹೋಗಿರುವುದು ಇದಕ್ಕೆ ಕಾರಣವಾಗಿದೆ. ಹೀಗಾಗಿ, ಮಳೆಯ ನೀರು ವ್ಯರ್ಥವಾಗಿ ಹರಿದು ಹೋಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದರಿಂದಾಗಿ ಆ ಭಾಗದಲ್ಲಿ ನೀರಿಗೆ ತೊಂದರೆಯಾಗಬಹುದು ಎಂದು ಅಂದಾಜಿಸಲಾಗಿದೆ.</p>.<p>‘ಹಿಂದಿನ ವರ್ಷ ಈ ಅವಧಿಯಲ್ಲಿ ಬಹಳಷ್ಟು ಕೆರೆಗಳಲ್ಲಿ ನೀರಿರಲಿಲ್ಲ. ಆದರೆ, ಹೋದ ವರ್ಷ ಉತ್ತಮ ಮಳೆಯಿಂದಾಗಿ ಈಗ ಬಹಳಷ್ಟು ಕೆರೆಗಳಲ್ಲಿ ನೀರು ಲಭ್ಯವಿದೆ. ಇದರಿಂದ ಆ ಭಾಗದ ಜನರಿಗೆ ಅನುಕೂಲವಾಗಲಿದೆ. ಕೃಷಿ ಚಟುವಟಿಕೆಗಳಿಗೂ ನೀರು ಲಭ್ಯವಾಗಲಿದೆ. ಕಡಿಮೆ ಮಳೆಯಾದ ಪ್ರದೇಶಗಳ ಕೆರೆಗಳಲ್ಲಿ ನೀರು ತುಂಬಿಲ್ಲ. ಕಳೆದ ವರ್ಷಗಳಿಗೆ ಹೋಲಿಸಿದರೆ ಬೈಲಹೊಂಗಲದಲ್ಲಿ 30 ಕೆರೆಗಳಲ್ಲಿ ಶೇ 51ರಿಂದ ಶೇ 99ರಷ್ಟು ನೀರಿರುವುದು ವಿಶೇಷವಾಗಿದೆ. ಕೆರೆಗಳು ತುಂಬಿರುವುದು ಆ ಭಾಗದಲ್ಲಿ ಅಂತರ್ಜಲ ಮಟ್ಟ ವೃದ್ಧಿಸುವುದಕ್ಕೂ ಪೂರಕವಾಗಿದೆ’ ಎಂದು ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಸಿ. ಸತೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಇಲಾಖೆಯಿಂದ ಕೆರೆಗಳನ್ನು ತುಂಬಿಸುವ ಕಾಮಗಾರಿಯನ್ನೂ ಕೈಗೊಳ್ಳಲಾಗಿದೆ. ವಿವಿಧೆಡೆ 19 ಕೆರೆಗಳಿಗೆ ಸಮೀಪದ ನದಿಗಳಿಂದ ನೀರು ಹರಿಸಲಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>