ವಿರೂಪಾಕ್ಷಪ್ಪ ಕೊಟ್ರಪ್ಪ ಬಹದ್ದೂರಬಂಡಿ ಎಂಬವರ ತೋಟಕ್ಕೆ ಶನಿವಾರ ರಾತ್ರಿ ನುಗ್ಗಿದ ದುಷ್ಕರ್ಮಿಗಳು ಮನಬಂದಂತೆ ಬಾಳಿ ಗಿಡಗಗಳನ್ನು ಧರೆಗೆ ಉರುಳಿಸಿದ್ದಾರೆ. ವಿರೂಪಾಕ್ಷಪ್ಪ ತಮ್ಮ ಎರಡು ಎಕರೆ ಜಮೀನಿನಲ್ಲಿ ಮೂರು ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳನ್ನು ಬೆಳೆದಿದ್ದರು. ಏಳು ತಿಂಗಳಿಂದ ಶ್ರಮ ವಹಿಸಿ ಬೆಳೆಯನ್ನು ಕಾಪಾಡಿಕೊಂಡಿದ್ದರು. ಆದರೆ, ದುಷ್ಕರ್ಮಿಗಳ ಕೃತ್ಯ ಅವರನ್ನು ಕಂಗೆಡಿಸಿದೆ.