ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನಾಮಹೊಂಗಲ ಸೇತುವೆ ಮುಳುಗಡೆ

Last Updated 7 ಸೆಪ್ಟೆಂಬರ್ 2020, 5:05 IST
ಅಕ್ಷರ ಗಾತ್ರ

ಬೆಳಗಾವಿ: ಭಾನುವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ತುಪ್ಪರಿ ಹಳ್ಳ ತುಂಬಿ ಹರಿಯುತ್ತಿದ್ದು, ಸವದತ್ತಿ ತಾಲ್ಲೂಕಿನ ಇನಾಮಹೊಂಗಲ ಬಳಿ ಇರುವ ಸೇತುವೆ ಮುಳುಗಡೆಯಾಗಿದೆ. ಸವದತ್ತಿ-ಧಾರವಾಡ ಸಂಪರ್ಕ ಕಲ್ಪಿಸುವ ಈ ಮಾರ್ಗದ ನಡುವೆ ವಾಹನಗಳ ಸಂಚಾರ ಸ್ಥಗಿತವಾಗಿದೆ.

ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಸತಿಗೃಹಗಳಿಗೆ ನೀರು ನುಗ್ಗಿದ್ದು, ಅಲ್ಲಿನ ನಿವಾಸಿಗಳು ಪರದಾಡುವಂತಾಯಿತು.

ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾನುವಾರ ಇಡೀ ರಾತ್ರಿ ಜೋರು ಮಳೆ‌ ಬಿದ್ದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT