ಬೆಳಗಾವಿ: ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ಮತ್ತು ಬೈಲಹೊಂಗಲ, ಖಾನಾಪುರ, ಚಿಕ್ಕೋಡಿ, ನಿಪ್ಪಾಣಿ, ಅಥಣಿಯಲ್ಲಿ ಮಳೆ ಮುಂದುವರಿಯಿತು. ದಕ್ಷಿಣ ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವುದರಿಂದ ಅಲ್ಲಿನ ಕೊಯ್ನಾ ಮೊದಲಾದ ಜಲಾಶಯಗಳಿಂದ ಕೃಷ್ಣಾ ನದಿಗೆ 4 ಲಕ್ಷ ಕ್ಯುಸೆಕ್ ನೀರು ಹರಿದುಬರುತ್ತಿದೆ. ಇದರಿಂದ, ನದಿ ನೀರಿನ ಮಟ್ಟ ಹೆಚ್ಚಾಗುವುದರೊಂದಿಗೆ ತೀರದಲ್ಲಿರುವ ಮತ್ತಷ್ಟು ಗ್ರಾಮಗಳಲ್ಲಿ ಆತಂಕ ಜಾಸ್ತಿಯಾಗಿದೆ.