ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಹಾಸ್ಟೆಲ್ನಲ್ಲಿ ನೀರಿನ ಅಭಾವದಿಂದ ಮುಕ್ತಿ ನೀಡದಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ವಿದ್ಯಾರ್ಥಿಗಳು, ಕ್ಯಾಂಪಸ್ನ ಮುಖ್ಯ ದ್ವಾರದ ಬಳಿ ಮೈಮೇಲೆ ನೀರು ಸುರಿದುಕೊಂಡು ಬುಧವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.