ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ| ನೀರಿನ ಕೊರತೆ: ಮೈಮೇಲೆ ನೀರು ಸುರಿದುಕೊಂಡು ಪ್ರತಿಭಟನೆ!

Last Updated 22 ಜನವರಿ 2020, 16:07 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಹಾಸ್ಟೆಲ್‌ನಲ್ಲಿ ನೀರಿನ ಅಭಾವದಿಂದ ಮುಕ್ತಿ ನೀಡದಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ವಿದ್ಯಾರ್ಥಿಗಳು, ಕ್ಯಾಂಪಸ್‌ನ ಮುಖ್ಯ ದ್ವಾರದ ಬಳಿ ಮೈಮೇಲೆ ನೀರು ಸುರಿದುಕೊಂಡು ಬುಧವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.

‘ನೀರಿನ ತೊಂದರೆ ಇರುವ ಕುರಿತು ವಾರ್ಡನ್‌ ಹಾಗೂ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅವರು ಭರವಸೆ ನೀಡಿ ಸಮಾಧಾನಪಡಿಸಿದ್ದಾರೆಯೇ ಹೊರತು ಸಮಸ್ಯೆ ಬಗೆಹರಿದಿಲ್ಲ. ಕುಡಿಯುವ ನೀರಿಗೂ ಪರದಾಡುವಂತಾಗಿದೆ’ ಎಂದು ಆರೋಪಿಸಿದರು.

‘ಬೇರೆ ಕಡೆಗೆ ಹೋಗಿ ನೀರು ತರಬೇಕಾದ ಸ್ಥಿತಿ ಇದೆ. ಕೆಲವು ವಿದ್ಯಾರ್ಥಿಗಳು ಭೂತರಾಮನಹಟ್ಟಿಯಿಂದ ನೀರು ತರುತ್ತಿದ್ದಾರೆ. ಕೂಡಲೇ ಈ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಸಮಸ್ಯೆ ಪರಿಹರಿಸಲಾಗಿದೆ. ಟ್ಯಾಂಕರ್‌ ತರಿಸಿ ನೀರು ಪೂರೈಸಲಾಗಿದೆ’ ಎಂದು ಕುಲಸಚಿವ ಬಸವರಾಜ ಪದ್ಮಶಾಲಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT