ಸಾವಳಗಿ (ಬೆಳಗಾವಿ ಜಿಲ್ಲೆ): ಗೋಕಾಕ ತಾಲ್ಲೂಕಿನಲ್ಲಿ ಪ್ರವಾಹದ ಹೊಡೆತಕ್ಕೆ ವಿವಿಧ ಗ್ರಾಮಗಳಲ್ಲಿನ ಪೈಪ್ಪೈಲ್ಗಳು ಹಾಳಾಗಿದ್ದವು. ಈ ಹಿನ್ನೆಲೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಗ್ರಾಮೀಣ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲಾಯಿತು.
ಸಾವಳಗಿಯಲ್ಲಿ ನೀರಿನ ಅಭಾವ ಉಂಟಾಗಿದೆ. ಇದನ್ನು ಮನಗಂಡ ಸಾವಳಗಿ ಗೆಳೆಯರ ಬಳಗದವರು ಸಾವಳಗಿ ಮತ್ತು ನಂದಗಾಂವಕ್ಕೆ ನೀರಿನ ವ್ಯವಸ್ಥೆ ಮಾಡಿದರು.