<p>ಬೆಳಗಾವಿ: ‘ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕಾನೂನಿನಲ್ಲಿ ಅವಕಾಶವಿಲ್ಲ.ಯೋಜನಾ ನಿರಾಶ್ರಿತರಿಗೆ ಮಾತ್ರ ಇದೆ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.</p>.<p>ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಪ್ರವಾಹ ಪೀಡಿತರಿಗೆ ಪರಿಹಾರ ನೀಡಲು ಅವಕಾಶವಿದೆ. ಈಗಾಗಲೇ ಪರಿಹಾರ ಒದಗಸಲಾಗಿದೆ. ಈ ಬಾರಿ ನೆರೆಯಿಂದ ಸಂತ್ರಸ್ತರಾದವರಿಗೂ ನೆರವು ಕೊಡಲಾಗುತ್ತಿದೆ’ ಎಂದರು.</p>.<p>‘ಜನರು ನದಿಯನ್ನು ಒತ್ತುವರಿ ಮಾಡಿಕೊಂಡು ಮನೆಗಳನ್ನು ಕಟ್ಟಿಕೊಳ್ಳುತ್ತಿದ್ದಾರೆ. ಇದರಿಂದ ನೀರು ಬರುತ್ತಿದೆ. ನದಿ ತೀರದ ಹತ್ತಿರದಲ್ಲಿ ಯಾರೂ ಮನೆ ಕಟ್ಟಿಕೊಳ್ಳಬಾರದು. ಎತ್ತರದ ಪ್ರದೇಶದಲ್ಲಿ ಮನೆಗಳನ್ನು ಕಟ್ಟಿಕೊಳ್ಳಬೇಕು’ ಎಂದು ಕೋರಿದರು.</p>.<p>‘ಮಲಪ್ರಭಾ ನದಿಯ ಹೂಳೆತ್ತಲು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮೀಕ್ಷೆ ಕಾರ್ಯ ನಡೆದಿದೆ. ಇನ್ನೂ ಪೂರ್ಣಗೊಂಡಿಲ್ಲ. ವರದಿ ಕೈಸೇರುತ್ತಿದ್ದಂತೆಯೇ ಹೂಳೆತ್ತುವ ಕಾರ್ಯ ಪ್ರಾರಂಭ ಮಾಡುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಕಾನೂನಿನಲ್ಲಿ ಅವಕಾಶವಿಲ್ಲ.ಯೋಜನಾ ನಿರಾಶ್ರಿತರಿಗೆ ಮಾತ್ರ ಇದೆ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.</p>.<p>ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಪ್ರವಾಹ ಪೀಡಿತರಿಗೆ ಪರಿಹಾರ ನೀಡಲು ಅವಕಾಶವಿದೆ. ಈಗಾಗಲೇ ಪರಿಹಾರ ಒದಗಸಲಾಗಿದೆ. ಈ ಬಾರಿ ನೆರೆಯಿಂದ ಸಂತ್ರಸ್ತರಾದವರಿಗೂ ನೆರವು ಕೊಡಲಾಗುತ್ತಿದೆ’ ಎಂದರು.</p>.<p>‘ಜನರು ನದಿಯನ್ನು ಒತ್ತುವರಿ ಮಾಡಿಕೊಂಡು ಮನೆಗಳನ್ನು ಕಟ್ಟಿಕೊಳ್ಳುತ್ತಿದ್ದಾರೆ. ಇದರಿಂದ ನೀರು ಬರುತ್ತಿದೆ. ನದಿ ತೀರದ ಹತ್ತಿರದಲ್ಲಿ ಯಾರೂ ಮನೆ ಕಟ್ಟಿಕೊಳ್ಳಬಾರದು. ಎತ್ತರದ ಪ್ರದೇಶದಲ್ಲಿ ಮನೆಗಳನ್ನು ಕಟ್ಟಿಕೊಳ್ಳಬೇಕು’ ಎಂದು ಕೋರಿದರು.</p>.<p>‘ಮಲಪ್ರಭಾ ನದಿಯ ಹೂಳೆತ್ತಲು ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮೀಕ್ಷೆ ಕಾರ್ಯ ನಡೆದಿದೆ. ಇನ್ನೂ ಪೂರ್ಣಗೊಂಡಿಲ್ಲ. ವರದಿ ಕೈಸೇರುತ್ತಿದ್ದಂತೆಯೇ ಹೂಳೆತ್ತುವ ಕಾರ್ಯ ಪ್ರಾರಂಭ ಮಾಡುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>