ಕಾಂಗ್ರೆಸ್ ಮುಖಂಡರಾದ ವಿನಯ ಕುಲಕರ್ಣಿ ಮತ್ತು ಎಂ.ಬಿ. ಪಾಟೀಲ ಬಿಜೆಪಿ ಸೇರ್ಪಡೆ ಆಗುತ್ತಾರೆಯೇ ಎಂಬ ಪ್ರಶ್ನೆಗೆ ಶನಿವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ವಿನಯ ಕುಲಕರ್ಣಿ ಪಕ್ಷಕ್ಕೆ ಬರುವ ಯಾವುದೇ ಬೆಳವಣಿಗೆ ನಡೆಯುತ್ತಿಲ್ಲ. ಅಂತಹ ಸಂದರ್ಭ ಬಂದಾಗ ನೋಡೋಣ. ಪಕ್ಷದ ಸಿದ್ಧಾಂತ ಒಪ್ಪಿ ಮತ್ತು ಯಾವುದೇ ಸ್ಥಾನಮಾನಗಳ ಅಪೇಕ್ಷೆ ಇಲ್ಲದೆ ಬರುವ ಎಲ್ಲರನ್ನೂ ಪಕ್ಷಕ್ಕೆ ಸ್ವಾಗತಿಸುತ್ತೇವೆ’ ಎಂದರು.