ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯನ್ನು ನಿಯಂತ್ರಿಸಲೇಬೇಕು: ಸತೀಶ ಜಾರಕಿಹೊಳಿ

Last Updated 14 ಏಪ್ರಿಲ್ 2021, 10:45 IST
ಅಕ್ಷರ ಗಾತ್ರ

ಬೆಳಗಾವಿ: ‘ಬಿಜೆಪಿಯನ್ನು ನಿಯಂತ್ರಿಸದೆ ಹೋದರೆ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ಏರಿಕೆ ಆಗುತ್ತದೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಗ್ರಾಮೀಣ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ಮಾಡಲಾಗಿದೆ. ಅಪಾರ ಪ್ರಮಾಣದಲ್ಲಿ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆ ತೆರಳಿ ಪ್ರಚಾರ ನಡೆಸಬೇಕು’ ಎಂದು ತಿಳಿಸಿದರು.

'ಮೂರು ವರ್ಷಗಳಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಅನೇಕ ಅಭವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರ ಕೆಲಸಗಳನ್ನು ಗುರುತಿಸಿ, ಕಾಂಗ್ರೆಸ್ ಬೆಂಬಲಿಸಬೇಕು. ಲೋಕಸಭೆಗೆ ಆಯ್ಕೆಯಾದ ಬಳಿಕ ಈ ಭಾಗದ ಶಾಸಕ ಜೊತೆ ಸೇರಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಭರವಸೆ ನೀಡಿದರು.

‘ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಮತ ನೀಡಬೇಕು ಎನ್ನುವುದು ನಿಮಗೂ ಗೊತ್ತಿದೆ. ತೈಲ ಬೆಲೆ, ದಿನನಿತ್ಯ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದು ಈ ಉಪ ಚುನಾವಣೆಯಲ್ಲಿ ಒಂದು ವಿಷಯವಾಗಬೇಕು’ ಎಂದು ಹೇಳಿದರು.

ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಮುಖಂಡ ಚನ್ನರಾಜ ಹಟ್ಟಿಹೊಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT