<p><strong>ನಾಗರಮುನ್ನೋಳಿ (ಬೆಳಗಾವಿ ಜಿಲ್ಲೆ): </strong>ಸಮೀಪದ ಹಂಚನಾಳ ಕೆ.ಕೆ. ಗ್ರಾಮದ ಅಮೋಘ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ರಾಯಬಾಗ ಮಂಡಲದಿಂದ ಶಾಮ್ಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಸೋಮವಾರ ನಡೆಯಿತು.</p>.<p>ಚಾಲನೆ ನೀಡಿದ ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ‘ಈಗ ನೆಟ್ಟಿರುವ ಸಸಿಗಳು ಮರವಾಗಿ ಮುಂದಿನ ಪೀಳಿಗೆಗೆ ವರದಾನ ಆಗಬೇಕು. ಈ ಉದ್ದೇಶದಿಂದ ಅವುಗಳನ್ನು ಕಾಪಾಡಿಕೊಳ್ಳಬೇಕು. ರೈತರು ತಮ್ಮ ಜಮೀನಿನ ಬದುವಿನಲ್ಲಿ ಗಡಿಗಳನ್ನು ನೆಟ್ಟು ಪೋಷಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಬಹಳಷ್ಟು ಸಾವು–ನೋವು ವರದಿಯಾಗಿದೆ. ಅನೇಕ ನಾಯಕರು, ಸಂಬಂಧಿಕರನ್ನು ಕಳೆದುಕೊಂಡಿದ್ದೇವೆ. ಮುಂದೆಯೂ ತಪ್ಪು ಮರುಕಳಿಸದಂತೆ ಗ್ರಾಮೀಣ ಪ್ರದೇಶದಲ್ಲಿ ಜನರು ಮುನ್ನೆಚ್ಚರಿಕೆ ವಹಿಸಬೇಕು. 2–3 ತಿಂಗಳವರೆಗೆ ಜಾತ್ರೆ, ಉತ್ಸವ, ಮದುವೆ ಮೊದಲಾದ ಸಮಾರಂಭಗಳಿಂದ ದೂರವಿರಬೇಕು’ ಎಂದು ತಿಳಿಸಿದರು.</p>.<p>‘ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಕೈಗಳನ್ನು ಆಗಾಗ ತೊಳೆದುಕೊಳ್ಳುವಂತಹ ಅಭ್ಯಾಸ ಮುಂದುವರಿಸಬೇಕು’ ಎಂದರು.</p>.<p>ಮುಖಂಡ ಮಹೇಶ ಭಾತೆ, ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಮಾತನಾಡಿದರು.</p>.<p>ರಾಯಬಾಗ ಮಂಡಲ ಅಧ್ಯಕ್ಷ ಬಸವರಾಜ ಡೋಣವಾಡೆ, ಒಬಿಸಿ ಮೋರ್ಚಾ ಅಧ್ಯಕ್ಷ ಬಸು ಮಾಳಗೆ,ಮುಖಂಡರಾದ ಸುರೇಶ ಬೆಲ್ಲದ, ವಿಜಯ ಕೋಠಿವಾಲೆ, ರವಿ ಹಿರೇಕೊಡಿ, ರಮೇಶ ಕಾಳನ್ನವರ, ಸದಾಶಿವ ಹುಂಜ್ಯಾಗೋಳ, ಸಂತೋಷ ಪಾಟೀಲ, ಸಿದ್ದು ಖಿಂಡಿ, ರಾಯಗೌಡ ಕೆಳಗಿನಮನಿ ಇದ್ದರು.</p>.<p>ರಾಜು ಹರಗನ್ನವರ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗರಮುನ್ನೋಳಿ (ಬೆಳಗಾವಿ ಜಿಲ್ಲೆ): </strong>ಸಮೀಪದ ಹಂಚನಾಳ ಕೆ.ಕೆ. ಗ್ರಾಮದ ಅಮೋಘ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ರಾಯಬಾಗ ಮಂಡಲದಿಂದ ಶಾಮ್ಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಸೋಮವಾರ ನಡೆಯಿತು.</p>.<p>ಚಾಲನೆ ನೀಡಿದ ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ‘ಈಗ ನೆಟ್ಟಿರುವ ಸಸಿಗಳು ಮರವಾಗಿ ಮುಂದಿನ ಪೀಳಿಗೆಗೆ ವರದಾನ ಆಗಬೇಕು. ಈ ಉದ್ದೇಶದಿಂದ ಅವುಗಳನ್ನು ಕಾಪಾಡಿಕೊಳ್ಳಬೇಕು. ರೈತರು ತಮ್ಮ ಜಮೀನಿನ ಬದುವಿನಲ್ಲಿ ಗಡಿಗಳನ್ನು ನೆಟ್ಟು ಪೋಷಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಬಹಳಷ್ಟು ಸಾವು–ನೋವು ವರದಿಯಾಗಿದೆ. ಅನೇಕ ನಾಯಕರು, ಸಂಬಂಧಿಕರನ್ನು ಕಳೆದುಕೊಂಡಿದ್ದೇವೆ. ಮುಂದೆಯೂ ತಪ್ಪು ಮರುಕಳಿಸದಂತೆ ಗ್ರಾಮೀಣ ಪ್ರದೇಶದಲ್ಲಿ ಜನರು ಮುನ್ನೆಚ್ಚರಿಕೆ ವಹಿಸಬೇಕು. 2–3 ತಿಂಗಳವರೆಗೆ ಜಾತ್ರೆ, ಉತ್ಸವ, ಮದುವೆ ಮೊದಲಾದ ಸಮಾರಂಭಗಳಿಂದ ದೂರವಿರಬೇಕು’ ಎಂದು ತಿಳಿಸಿದರು.</p>.<p>‘ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದು, ಕೈಗಳನ್ನು ಆಗಾಗ ತೊಳೆದುಕೊಳ್ಳುವಂತಹ ಅಭ್ಯಾಸ ಮುಂದುವರಿಸಬೇಕು’ ಎಂದರು.</p>.<p>ಮುಖಂಡ ಮಹೇಶ ಭಾತೆ, ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಮಾತನಾಡಿದರು.</p>.<p>ರಾಯಬಾಗ ಮಂಡಲ ಅಧ್ಯಕ್ಷ ಬಸವರಾಜ ಡೋಣವಾಡೆ, ಒಬಿಸಿ ಮೋರ್ಚಾ ಅಧ್ಯಕ್ಷ ಬಸು ಮಾಳಗೆ,ಮುಖಂಡರಾದ ಸುರೇಶ ಬೆಲ್ಲದ, ವಿಜಯ ಕೋಠಿವಾಲೆ, ರವಿ ಹಿರೇಕೊಡಿ, ರಮೇಶ ಕಾಳನ್ನವರ, ಸದಾಶಿವ ಹುಂಜ್ಯಾಗೋಳ, ಸಂತೋಷ ಪಾಟೀಲ, ಸಿದ್ದು ಖಿಂಡಿ, ರಾಯಗೌಡ ಕೆಳಗಿನಮನಿ ಇದ್ದರು.</p>.<p>ರಾಜು ಹರಗನ್ನವರ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>