<p><strong>ಬೆಳಗಾವಿ:</strong> ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲೂ ನಮ್ಮಲ್ಲಿ ಕನ್ನಡದ ಅಸ್ಮಿತೆ ಸದಾ ಇರಬೇಕು’ ಎಂದು ಕೆಆರ್ಸಿಇಎಸ್ ಪದವಿ ಕಾಲೇಜಿನ ಪ್ರಾಚಾರ್ಯ ಜಿ.ಕೆ. ಗಾಂವ್ಕರ್ ಹೇಳಿದರು.</p>.<p>ಇಲ್ಲಿನ ಎಸ್ಜಿವಿ ಮಹೇಶ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಶನಿವಾರ ಆಯೋಜಿಸಿದ್ದ ‘ಕನ್ನಡ ಭಾವ-ವೈಭವ’ ಕಾರ್ಯಕ್ರಮ (ವರ್ಚುಯೆಲ್)ದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡದ ನೆಲದಲ್ಲಿ ಜನಿಸಿದ ನಾವು ಬೇರೆ ಬೇರೆ ಭಾಷೆಗಳನ್ನು ಗೌರವಿಸಬೇಕು. ಆದರೆ, ಕನ್ನಡ ನಮ್ಮ ಉಸಿರಾಗಿರಬೇಕು. ಕನ್ನಡ ಭಾಷೆಗೆ ನಶಿಸುವ ಆತಂಕವಿಲ್ಲ. ಆದರೆ, ಹೆಚ್ಚೆಚ್ಚು ಬಳಸುವಂತಾಗಬೇಕು. ಕನ್ನಡ ಮಾತನಾಡಲು ಹಿಂಜರಿಯುವ ಮನೋಭಾವ ಸರಿಯಲ್ಲ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಂ.ವಿ. ಭಟ್ಟ, ‘ಕನ್ನಡ ಕುಟುಂಬದ ಭಾಷೆ. ಅದು ನಮ್ಮ ಹಕ್ಕು. ಅದನ್ನು ಸದಾ ಬಳಸಿಕೊಳ್ಳಬೇಕು; ರಕ್ಷಿಸಿಕೊಳ್ಳಬೇಕು’ ಎಂದು ಆಶಿಸಿದರು.</p>.<p>ಮುಕುಂದ ಗೋಖಲೆ, ಅಭಿಜಿತ ಹಣಗೋಡಿಮಠ ಹಾಗೂ ವಿದ್ಯಾರ್ಥಿಗಳು ಮಾತನಾಡಿದರು.</p>.<p>ಪಾಲ್ಗೊಂಡಿದ್ದವರಿಗೆ ಕನ್ನಡ ಶಾಲು ಹಾಗೂ ಕನ್ನಡ ಪುಸ್ತಕ ನೀಡಲಾಯಿತು.</p>.<p>ವಿದ್ಯಾರ್ಥಿನಿ ಸುರಭಿ ಖೋತ್ ಪ್ರಾರ್ಥಿಸಿದರು. ಉಪ ಪ್ರಾಚಾರ್ಯ ಆನಂದ ಖೋತ್ ಸ್ವಾಗತಿಸಿದರು. ನರಸಿಂಹ ಭಟ್ಟ ಪರಿಚಯಿಸಿದರು. ಉಪನ್ಯಾಸಕ ರಾಜು ಭಟ್ಟ ನಿರೂಪಿಸಿದರು. ಉಪನ್ಯಾಸಕ ಮಹೇಶ ಢವಳೇಶ್ವರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲೂ ನಮ್ಮಲ್ಲಿ ಕನ್ನಡದ ಅಸ್ಮಿತೆ ಸದಾ ಇರಬೇಕು’ ಎಂದು ಕೆಆರ್ಸಿಇಎಸ್ ಪದವಿ ಕಾಲೇಜಿನ ಪ್ರಾಚಾರ್ಯ ಜಿ.ಕೆ. ಗಾಂವ್ಕರ್ ಹೇಳಿದರು.</p>.<p>ಇಲ್ಲಿನ ಎಸ್ಜಿವಿ ಮಹೇಶ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಶನಿವಾರ ಆಯೋಜಿಸಿದ್ದ ‘ಕನ್ನಡ ಭಾವ-ವೈಭವ’ ಕಾರ್ಯಕ್ರಮ (ವರ್ಚುಯೆಲ್)ದಲ್ಲಿ ಅವರು ಮಾತನಾಡಿದರು.</p>.<p>‘ಕನ್ನಡದ ನೆಲದಲ್ಲಿ ಜನಿಸಿದ ನಾವು ಬೇರೆ ಬೇರೆ ಭಾಷೆಗಳನ್ನು ಗೌರವಿಸಬೇಕು. ಆದರೆ, ಕನ್ನಡ ನಮ್ಮ ಉಸಿರಾಗಿರಬೇಕು. ಕನ್ನಡ ಭಾಷೆಗೆ ನಶಿಸುವ ಆತಂಕವಿಲ್ಲ. ಆದರೆ, ಹೆಚ್ಚೆಚ್ಚು ಬಳಸುವಂತಾಗಬೇಕು. ಕನ್ನಡ ಮಾತನಾಡಲು ಹಿಂಜರಿಯುವ ಮನೋಭಾವ ಸರಿಯಲ್ಲ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಂ.ವಿ. ಭಟ್ಟ, ‘ಕನ್ನಡ ಕುಟುಂಬದ ಭಾಷೆ. ಅದು ನಮ್ಮ ಹಕ್ಕು. ಅದನ್ನು ಸದಾ ಬಳಸಿಕೊಳ್ಳಬೇಕು; ರಕ್ಷಿಸಿಕೊಳ್ಳಬೇಕು’ ಎಂದು ಆಶಿಸಿದರು.</p>.<p>ಮುಕುಂದ ಗೋಖಲೆ, ಅಭಿಜಿತ ಹಣಗೋಡಿಮಠ ಹಾಗೂ ವಿದ್ಯಾರ್ಥಿಗಳು ಮಾತನಾಡಿದರು.</p>.<p>ಪಾಲ್ಗೊಂಡಿದ್ದವರಿಗೆ ಕನ್ನಡ ಶಾಲು ಹಾಗೂ ಕನ್ನಡ ಪುಸ್ತಕ ನೀಡಲಾಯಿತು.</p>.<p>ವಿದ್ಯಾರ್ಥಿನಿ ಸುರಭಿ ಖೋತ್ ಪ್ರಾರ್ಥಿಸಿದರು. ಉಪ ಪ್ರಾಚಾರ್ಯ ಆನಂದ ಖೋತ್ ಸ್ವಾಗತಿಸಿದರು. ನರಸಿಂಹ ಭಟ್ಟ ಪರಿಚಯಿಸಿದರು. ಉಪನ್ಯಾಸಕ ರಾಜು ಭಟ್ಟ ನಿರೂಪಿಸಿದರು. ಉಪನ್ಯಾಸಕ ಮಹೇಶ ಢವಳೇಶ್ವರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>