<p><strong>ಬೆಳಗಾವಿ: </strong>ನವೀಕರಿಸಬಹುದಾದ ಇಂಧನವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದು ಡಾ.ಸ.ಜ. ನಾಗಲೋಟಿಮಠ ವಿಜ್ಞಾನ ಕೇಂದ್ರದ ಯೋಜನಾ ಸಹಾಯಕ ರಾಜಶೇಖರ ಪಾಟೀಲ ಹೇಳಿದರು.</p>.<p>ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಮಾನವನ ದುರಾಸೆಪರಿಸರದ ಸಮಸ್ಯೆಗಳಿಗೆ ಕಾರಣ. ಹೆಚ್ಚುತ್ತಿರುವ ನಮ್ಮ ಬೇಡಿಕೆಗಳು ನಿಸರ್ಗವನ್ನು ನಾಶಪಡಿಸುತ್ತಿವೆ’ ಎಂದು ವಿಷಾದಿಸಿದರು.</p>.<p>‘ನೀರು ಪ್ರಕೃತಿದತ್ತವಾಗಿ ಮಾನವನಿಗೆ ದೊರೆತ ಅತ್ಯಮೂಲ್ಯ ಸಂಪನ್ಮೂಲವಾಗಿದೆ. ಅದನ್ನು ಮಿತವಾಗಿ ಬಳಸಬೇಕು ಹಾಗೂ ಭವಿಷ್ಯಕ್ಕಾಗಿಯೂ ಸಂರಕ್ಷಿಸಬೇಕು. ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರ ಶಕ್ತಿ, ಜಲ ಶಕ್ತಿ, ಜೈವಿಕ ಇಂಧನದ ಅವಲಂಬನೆ ಹೆಚ್ಚಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಸಂಪನ್ಮೂಲ ವ್ಯಕ್ತಿ ಪ್ರದೀಪ ಪಟ್ಟಣಶೆಟ್ಟಿ ಮಾತನಾಡಿ, ‘ಸೌರಶಕ್ತಿ ಬಳಕೆಗೆ ದೇಶದಲ್ಲಿ ಬಹಳಷ್ಟು ಅವಕಾಶಗಳಿವೆ’ ಎಂದರು.</p>.<p>ವಿಟಿಯು ಅಧಿಕಾರಿ ಡಾ.ಚಿದಾನಂದ ಗವಿಮಠ ಮಾತನಾಡಿದರು. ಆಶ್ರಯ ಸ್ವಧಾರ ಗೃಹದ ಸೂಪರಿಂಟೆಂಡೆಂಟ್ ರಾಧಿಕಾ ಬಡಿಗೇರ ಸ್ವಾಗತಿಸಿದರು. ಮಲ್ಲಪ್ಪ ಮಾನಗಾಂವಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ನವೀಕರಿಸಬಹುದಾದ ಇಂಧನವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದು ಡಾ.ಸ.ಜ. ನಾಗಲೋಟಿಮಠ ವಿಜ್ಞಾನ ಕೇಂದ್ರದ ಯೋಜನಾ ಸಹಾಯಕ ರಾಜಶೇಖರ ಪಾಟೀಲ ಹೇಳಿದರು.</p>.<p>ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಮಾನವನ ದುರಾಸೆಪರಿಸರದ ಸಮಸ್ಯೆಗಳಿಗೆ ಕಾರಣ. ಹೆಚ್ಚುತ್ತಿರುವ ನಮ್ಮ ಬೇಡಿಕೆಗಳು ನಿಸರ್ಗವನ್ನು ನಾಶಪಡಿಸುತ್ತಿವೆ’ ಎಂದು ವಿಷಾದಿಸಿದರು.</p>.<p>‘ನೀರು ಪ್ರಕೃತಿದತ್ತವಾಗಿ ಮಾನವನಿಗೆ ದೊರೆತ ಅತ್ಯಮೂಲ್ಯ ಸಂಪನ್ಮೂಲವಾಗಿದೆ. ಅದನ್ನು ಮಿತವಾಗಿ ಬಳಸಬೇಕು ಹಾಗೂ ಭವಿಷ್ಯಕ್ಕಾಗಿಯೂ ಸಂರಕ್ಷಿಸಬೇಕು. ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರ ಶಕ್ತಿ, ಜಲ ಶಕ್ತಿ, ಜೈವಿಕ ಇಂಧನದ ಅವಲಂಬನೆ ಹೆಚ್ಚಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಸಂಪನ್ಮೂಲ ವ್ಯಕ್ತಿ ಪ್ರದೀಪ ಪಟ್ಟಣಶೆಟ್ಟಿ ಮಾತನಾಡಿ, ‘ಸೌರಶಕ್ತಿ ಬಳಕೆಗೆ ದೇಶದಲ್ಲಿ ಬಹಳಷ್ಟು ಅವಕಾಶಗಳಿವೆ’ ಎಂದರು.</p>.<p>ವಿಟಿಯು ಅಧಿಕಾರಿ ಡಾ.ಚಿದಾನಂದ ಗವಿಮಠ ಮಾತನಾಡಿದರು. ಆಶ್ರಯ ಸ್ವಧಾರ ಗೃಹದ ಸೂಪರಿಂಟೆಂಡೆಂಟ್ ರಾಧಿಕಾ ಬಡಿಗೇರ ಸ್ವಾಗತಿಸಿದರು. ಮಲ್ಲಪ್ಪ ಮಾನಗಾಂವಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>