<p><strong>ಬೆಳಗಾವಿ: </strong>‘ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನ ಅಪಾಯದಲ್ಲಿದೆ. ಅದನ್ನು ವಿರೋಧಿಗಳಿಂದ ಉಳಿಸುವ ಕೆಲಸವಾಗಬೇಕಿದೆ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ನೌಕರರ ಸಮನ್ವಯ ಸಮಿತಿ ಜಿಲ್ಲಾ ಘಟಕದಿಂದ ಗಣರಾಜ್ಯೋತ್ಸವದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಅನುಷ್ಠಾನ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ಮೊದಲು ಇದನ್ನು ಎಲ್ಲರೂ ಒಪ್ಪಿಕೊಂಡಿದ್ದರು. ಆದರೆ, ಈಗ ಅದನ್ನು ವಿರೋಧ ಮಾಡುತ್ತಿದ್ದಾರೆ. ಕೆಲವರು ಬದಲಾವಣೆ ಮಾಡಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ಹೀಗಾಗಿ, ಸಂವಿಧಾನವನ್ನುಉಳಿಸಿಕೊಳ್ಳುವ ಅನಿರ್ವಾಯತೆ ಇದೆ’ ಎಂದರು.</p>.<p>‘ರಾಜಕೀಯ ನಾಯಕರು ಮತ ಬ್ಯಾಂಕ್ಗಾಗಿ 5ನೇ ತರಗತಿ ವಿದ್ಯಾರ್ಥಿಗಳಿಗೆ ಸಂವಿಧಾನದ ತಪ್ಪು ಮಾಹಿತಿ ಕೊಡುತ್ತಿದ್ದಾರೆ. ಹೀಗಾಗಿ, ಪರಿಶಿಷ್ಟರು ಮಕ್ಕಳನ್ನು ಎಂಜಿನಿಯರ್, ಡಾಕ್ಟರ್ ಮಾಡುವ ಕೆಲಸದಲ್ಲಿ ಮುಳುಗದೇ ಸಂವಿಧಾನದ ಬಗ್ಗೆಯೂ ತಿಳಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸಂವಿಧಾನ ವಿರೋಧಿಗಳು ದಿನನಿತ್ಯ ಸಂಘಟಿತರಾಗುತ್ತಿದ್ದಾರೆ. ಅದಕ್ಕೆ ನೀವು ಕೂಡಾ ಕ್ರಿಯಾಶೀಲರಾಗಿ ಸಂವಿಧಾನದ ಇತಿಹಾಸವನ್ನು ತಿಳಿಸಿಕೊಡುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ಮುಂಬೈ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಕೆ.ಡಿ. ಮಂತ್ರೇಶಿ ‘ಅಂಬೇಡ್ಕರ್ ಅವರು ಬರೆದ ಸಂವಿಧಾನದ ಇತಿಹಾಸ’ ವಿಷಯದ ಕುರಿತು ಮಾತನಾಡಿದರು.</p>.<p>ಸಮಿತಿಯ ರಾಜ್ಯ ಉಪಾಧ್ಯಕ್ಷ ಆರ್. ಮೋಹನ್, ಕಾರ್ಯದರ್ಶಿ ಎಚ್. ಗೋಪಾಲಕೃಷ್ಣ, ಶಿಕ್ಷಣಾಧಿಕಾರಿ ಮಹಾದೇವ ಬೆಳ್ಳಿನ್ನವರ, ಜಿಲ್ಲಾ ಘಟಕದ ಅಧ್ಯಕ್ಷ ರಾಹುಲ ಮೇತ್ರಿ, ರವಿ ಭಜಂತ್ರಿ, ಮಹಾಂತೇಶ ಚಲವಾದಿ, ರಾಜು ಕೋಲಕಾರ, ಶ್ರಾವಣ ಶೆಂಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಡಾ.ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನ ಅಪಾಯದಲ್ಲಿದೆ. ಅದನ್ನು ವಿರೋಧಿಗಳಿಂದ ಉಳಿಸುವ ಕೆಲಸವಾಗಬೇಕಿದೆ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ನೌಕರರ ಸಮನ್ವಯ ಸಮಿತಿ ಜಿಲ್ಲಾ ಘಟಕದಿಂದ ಗಣರಾಜ್ಯೋತ್ಸವದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಅನುಷ್ಠಾನ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ಮೊದಲು ಇದನ್ನು ಎಲ್ಲರೂ ಒಪ್ಪಿಕೊಂಡಿದ್ದರು. ಆದರೆ, ಈಗ ಅದನ್ನು ವಿರೋಧ ಮಾಡುತ್ತಿದ್ದಾರೆ. ಕೆಲವರು ಬದಲಾವಣೆ ಮಾಡಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ಹೀಗಾಗಿ, ಸಂವಿಧಾನವನ್ನುಉಳಿಸಿಕೊಳ್ಳುವ ಅನಿರ್ವಾಯತೆ ಇದೆ’ ಎಂದರು.</p>.<p>‘ರಾಜಕೀಯ ನಾಯಕರು ಮತ ಬ್ಯಾಂಕ್ಗಾಗಿ 5ನೇ ತರಗತಿ ವಿದ್ಯಾರ್ಥಿಗಳಿಗೆ ಸಂವಿಧಾನದ ತಪ್ಪು ಮಾಹಿತಿ ಕೊಡುತ್ತಿದ್ದಾರೆ. ಹೀಗಾಗಿ, ಪರಿಶಿಷ್ಟರು ಮಕ್ಕಳನ್ನು ಎಂಜಿನಿಯರ್, ಡಾಕ್ಟರ್ ಮಾಡುವ ಕೆಲಸದಲ್ಲಿ ಮುಳುಗದೇ ಸಂವಿಧಾನದ ಬಗ್ಗೆಯೂ ತಿಳಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸಂವಿಧಾನ ವಿರೋಧಿಗಳು ದಿನನಿತ್ಯ ಸಂಘಟಿತರಾಗುತ್ತಿದ್ದಾರೆ. ಅದಕ್ಕೆ ನೀವು ಕೂಡಾ ಕ್ರಿಯಾಶೀಲರಾಗಿ ಸಂವಿಧಾನದ ಇತಿಹಾಸವನ್ನು ತಿಳಿಸಿಕೊಡುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.</p>.<p>ಮುಂಬೈ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಕೆ.ಡಿ. ಮಂತ್ರೇಶಿ ‘ಅಂಬೇಡ್ಕರ್ ಅವರು ಬರೆದ ಸಂವಿಧಾನದ ಇತಿಹಾಸ’ ವಿಷಯದ ಕುರಿತು ಮಾತನಾಡಿದರು.</p>.<p>ಸಮಿತಿಯ ರಾಜ್ಯ ಉಪಾಧ್ಯಕ್ಷ ಆರ್. ಮೋಹನ್, ಕಾರ್ಯದರ್ಶಿ ಎಚ್. ಗೋಪಾಲಕೃಷ್ಣ, ಶಿಕ್ಷಣಾಧಿಕಾರಿ ಮಹಾದೇವ ಬೆಳ್ಳಿನ್ನವರ, ಜಿಲ್ಲಾ ಘಟಕದ ಅಧ್ಯಕ್ಷ ರಾಹುಲ ಮೇತ್ರಿ, ರವಿ ಭಜಂತ್ರಿ, ಮಹಾಂತೇಶ ಚಲವಾದಿ, ರಾಜು ಕೋಲಕಾರ, ಶ್ರಾವಣ ಶೆಂಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>