<p><strong>ಬೆಳಗಾವಿ</strong>: ‘ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಚುನಾವಣೆ ನಡೆಯಬೇಕು. ಶಾಸಕರ ಆಯ್ಕೆಯಾಗಬೇಕು. ನಂತರವೇ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದು ತೀರ್ಮಾನವಾಗುತ್ತದೆ. ಈಗಲೇ ಆ ಬಗ್ಗೆ ಹೇಳಲಾಗುವುದಿಲ್ಲ. ಅಭಿಮಾನಿಗಳು ತಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ನಿರ್ಧರಿಸುವವರು ಪಕ್ಷದ ಶಾಸಕರು ಹಾಗೂ ಹೈಕಮಾಂಡ್’ ಎಂದರು.</p>.<p class="Subhead"><strong>ರಮೇಶ ರಾಜೀನಾಮೆ ಬಗ್ಗೆ ಗೊತ್ತಿಲ್ಲ:</strong>‘ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ರಾಜೀನಾಮೆ ಬಗ್ಗೆ ನನಗೆ ಗೊತ್ತಿಲ್ಲ. ಆ ಬಗ್ಗೆ ಅವರನ್ನೇ ಕೇಳಿ. ಅವರು ಕಾಂಗ್ರೆಸ್ಗೆ ಮರಳುವ ಬಗ್ಗೆ ನನ್ನೊಂದಿಗೆ ಚರ್ಚಿಸಿಲ್ಲ. ಹೀಗಾಗಿ, ನಾನು ಆ ಬಗ್ಗೆ ಯಾವ ಅಭಿಪ್ರಾಯವನ್ನೂ ಹೇಳುವ ಪ್ರಶ್ನೆ ಇಲ್ಲ. ಅದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ಜಿಲ್ಲಾ ಮಟ್ಟದಲ್ಲಿದ್ದಂಥವರು ಆ ಬಗ್ಗೆ ಮಾತನಾಡಲು ಆಗುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಚುನಾವಣೆ ನಡೆಯಬೇಕು. ಶಾಸಕರ ಆಯ್ಕೆಯಾಗಬೇಕು. ನಂತರವೇ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದು ತೀರ್ಮಾನವಾಗುತ್ತದೆ. ಈಗಲೇ ಆ ಬಗ್ಗೆ ಹೇಳಲಾಗುವುದಿಲ್ಲ. ಅಭಿಮಾನಿಗಳು ತಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ನಿರ್ಧರಿಸುವವರು ಪಕ್ಷದ ಶಾಸಕರು ಹಾಗೂ ಹೈಕಮಾಂಡ್’ ಎಂದರು.</p>.<p class="Subhead"><strong>ರಮೇಶ ರಾಜೀನಾಮೆ ಬಗ್ಗೆ ಗೊತ್ತಿಲ್ಲ:</strong>‘ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ರಾಜೀನಾಮೆ ಬಗ್ಗೆ ನನಗೆ ಗೊತ್ತಿಲ್ಲ. ಆ ಬಗ್ಗೆ ಅವರನ್ನೇ ಕೇಳಿ. ಅವರು ಕಾಂಗ್ರೆಸ್ಗೆ ಮರಳುವ ಬಗ್ಗೆ ನನ್ನೊಂದಿಗೆ ಚರ್ಚಿಸಿಲ್ಲ. ಹೀಗಾಗಿ, ನಾನು ಆ ಬಗ್ಗೆ ಯಾವ ಅಭಿಪ್ರಾಯವನ್ನೂ ಹೇಳುವ ಪ್ರಶ್ನೆ ಇಲ್ಲ. ಅದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ಜಿಲ್ಲಾ ಮಟ್ಟದಲ್ಲಿದ್ದಂಥವರು ಆ ಬಗ್ಗೆ ಮಾತನಾಡಲು ಆಗುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>