ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ: ಹೆಚ್ಚಿನ ಅನುದಾನಕ್ಕೆ ಒತ್ತಡ

Last Updated 6 ಅಕ್ಟೋಬರ್ 2019, 14:19 IST
ಅಕ್ಷರ ಗಾತ್ರ

ಬೆಳಗಾವಿ: ‘ರಾಜ್ಯದಲ್ಲಿ ನೆರೆಯಿಂದಾಗಿ ಅಪಾರ ನಷ್ಟವಾಗಿದೆ. ಹೀಗಾಗಿ, ಹೆಚ್ಚಿನ ನೆರವು ನೀಡುವಂತೆ ಕೋರಿ ಸಂಸದರೆಲ್ಲವರೂ ಕೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುತ್ತೇವೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ನಮ್ಮೆಲ್ಲ ನಾಯಕರ ಪರಿಶ್ರಮದಿಂದಾಗಿ ಕೇಂದ್ರದಿಂದ ಪರಿಹಾರ ಹಣ ಬಂದಿದೆ. ₹ 1,200 ಕೋಟಿ ಮಧ್ಯಂತರ ಪರಿಹಾರ ಘೋಷಿಸಿರುವುದು ಸ್ವಾಗತಾರ್ಹ’ ಎಂದರು. ‘ಕಾಶ್ಮೀರ ನಮ್ಮ ದೇಶದ ಅವಿಭಾಜ್ಯ ಭಾಗವಾಗಿದೆ. ಈ ಪ್ರದೇಶದ ಬಗ್ಗೆಯೂ ಕವಿಗಳು ಕಾವ್ಯ ರಚಿಸಬೇಕು’ ಎಂದು ಕೋರಿದರು. ‘ಐತಿಹಾಸಿಕ ಕಿತ್ತೂರು ಉತ್ಸವವನ್ನು ವಿಜೃಂಭಣೆಯಿಂದ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT