<p><strong>ಬೆಳಗಾವಿ:</strong> ‘ಮಹದಾಯಿ ನದಿಯಲ್ಲಿನ ನಮ್ಮ ಪಾಲಿನ ನೀರು ಉಪಯೋಗಿಸಿಕೊಳ್ಳಲು ಬದ್ಧವಿದ್ದೇವೆ. ಇದಕ್ಕಾಗಿ ಯೋಜನೆ ಸಿದ್ಧಪಡಿಸುತ್ತಿದ್ದೇವೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಇತ್ಯರ್ಥವಾದ ಮರುದಿನವೇ ಕೆಲಸ ಆರಂಭಿಸುತ್ತೇವೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. 13.4 ಟಿಎಂಸಿ ಅಡಿ ನೀರು ನಮಗೆ ಹಂಚಿಕೆಯಾಗಿದೆ. ಇದರಲ್ಲಿ 5 ಟಿಎಂಸಿ ನೀರು ಕುಡಿಯುವ ನೀರಿಗೆ ಬಳಕೆ ಮಾಡಿಕೊಳ್ಳಲಾಗುವುದು. 8 ಟಿಎಂಸಿಯನ್ನು ವಿದ್ಯುತ್ ಉತ್ಪಾದನೆಗೆ ನದಿಗೆ ಬಿಡಲಾಗುತ್ತದೆ. 2015ರಲ್ಲಿ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಅದನ್ನೇ ಅಂತಿಮ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದೇವೆ’ ಎಂದರು.</p>.<p>‘ಗೋವಾ ಮತ್ತು ಮಹಾರಾಷ್ಟ್ರ ರಾಜ್ಯ ಸರ್ಕಾರಗಳು ನ್ಯಾಯಾಲಯದ ಮೆಟ್ಟಿಲೇರಿವೆ. ನಾವೂ ಅರ್ಜಿ ಸಲ್ಲಿಸಿದ್ದೇವೆ’ ಎಂದರು.</p>.<p>‘ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂಬ ಆಗ್ರಹದ ಬಗ್ಗೆ ಸಾಧಕ– ಬಾಧಕಗಳ ಬಗ್ಗೆ ಚರ್ಚಿಸಬೇಕಾಗುತ್ತದೆ. ಪ್ರತಿಯೊಂದು ಜಿಲ್ಲೆಯವರೂ ಒಂದೊಂದು ಬೇಡಿಕೆ ಇಟ್ಟರೆ ಕಷ್ಟವಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<p>‘12ನೇ ಶತಮಾನದಲ್ಲಿ ಶರಣರು ಕ್ರಾಂತಿ ಮಾಡಿದ್ದ ಹಿನ್ನೆಲೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಮಹದಾಯಿ ನದಿಯಲ್ಲಿನ ನಮ್ಮ ಪಾಲಿನ ನೀರು ಉಪಯೋಗಿಸಿಕೊಳ್ಳಲು ಬದ್ಧವಿದ್ದೇವೆ. ಇದಕ್ಕಾಗಿ ಯೋಜನೆ ಸಿದ್ಧಪಡಿಸುತ್ತಿದ್ದೇವೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ಇತ್ಯರ್ಥವಾದ ಮರುದಿನವೇ ಕೆಲಸ ಆರಂಭಿಸುತ್ತೇವೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. 13.4 ಟಿಎಂಸಿ ಅಡಿ ನೀರು ನಮಗೆ ಹಂಚಿಕೆಯಾಗಿದೆ. ಇದರಲ್ಲಿ 5 ಟಿಎಂಸಿ ನೀರು ಕುಡಿಯುವ ನೀರಿಗೆ ಬಳಕೆ ಮಾಡಿಕೊಳ್ಳಲಾಗುವುದು. 8 ಟಿಎಂಸಿಯನ್ನು ವಿದ್ಯುತ್ ಉತ್ಪಾದನೆಗೆ ನದಿಗೆ ಬಿಡಲಾಗುತ್ತದೆ. 2015ರಲ್ಲಿ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಅದನ್ನೇ ಅಂತಿಮ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದೇವೆ’ ಎಂದರು.</p>.<p>‘ಗೋವಾ ಮತ್ತು ಮಹಾರಾಷ್ಟ್ರ ರಾಜ್ಯ ಸರ್ಕಾರಗಳು ನ್ಯಾಯಾಲಯದ ಮೆಟ್ಟಿಲೇರಿವೆ. ನಾವೂ ಅರ್ಜಿ ಸಲ್ಲಿಸಿದ್ದೇವೆ’ ಎಂದರು.</p>.<p>‘ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು ಎಂಬ ಆಗ್ರಹದ ಬಗ್ಗೆ ಸಾಧಕ– ಬಾಧಕಗಳ ಬಗ್ಗೆ ಚರ್ಚಿಸಬೇಕಾಗುತ್ತದೆ. ಪ್ರತಿಯೊಂದು ಜಿಲ್ಲೆಯವರೂ ಒಂದೊಂದು ಬೇಡಿಕೆ ಇಟ್ಟರೆ ಕಷ್ಟವಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು.</p>.<p>‘12ನೇ ಶತಮಾನದಲ್ಲಿ ಶರಣರು ಕ್ರಾಂತಿ ಮಾಡಿದ್ದ ಹಿನ್ನೆಲೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>