ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. 13.4 ಟಿಎಂಸಿ ಅಡಿ ನೀರು ನಮಗೆ ಹಂಚಿಕೆಯಾಗಿದೆ. ಇದರಲ್ಲಿ 5 ಟಿಎಂಸಿ ನೀರು ಕುಡಿಯುವ ನೀರಿಗೆ ಬಳಕೆ ಮಾಡಿಕೊಳ್ಳಲಾಗುವುದು. 8 ಟಿಎಂಸಿಯನ್ನು ವಿದ್ಯುತ್ ಉತ್ಪಾದನೆಗೆ ನದಿಗೆ ಬಿಡಲಾಗುತ್ತದೆ. 2015ರಲ್ಲಿ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಅದನ್ನೇ ಅಂತಿಮ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದೇವೆ’ ಎಂದರು.