ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಪ್ರಭಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಥನಿ ಮರಿಯಪ್ಪ, ‘ಮುಧೋಳ ನಾಯಿ ಹಿಂಡನ್ನು ಚಿರತೆ ಸೆರೆಗೆ ಬಳಸುವ ಬಗ್ಗೆ ಪರಿಶೀಲಿಸಲಾಗುವುದು. ನಾಯಿ ಹಿಂಡಿನಿಂದಲೂ ಚಿರತೆಗೆ ತೊಂದರೆ ಆಗದಂತೆ ನೋಡಿಕೊಳ್ಳುವ ಸವಾಲು ಹುಟ್ಟುತ್ತದೆ. ಹಾಗಾಗಿ, ಸಚಿವರ ಸಲಹೆ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು’ ಎಂದರು.