‘ಈ ಸಲದ ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿಯನ್ನು ಗೆಲ್ಲಿಸಿ. ಇದು ಜಿಲ್ಲೆಯ ಜನರ ಸ್ವಾಭಿಮಾನದ ಪ್ರಶ್ನೆ’ ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅಭಯ ಪಾಟೀಲ, ‘ಜಗದೀಶ ಶೆಟ್ಟರ್ ಸಾಂಕೇತಿಕವಾಗಿ ಬಿಜೆಪಿ ಅಭ್ಯರ್ಥಿ ಇರಬಹುದು. ಆದರೆ, ನಮ್ಮ ಪಕ್ಷದ ಪ್ರತಿ ಕಾರ್ಯಕರ್ತನೂ ಇಲ್ಲಿ ಅಭ್ಯರ್ಥಿಯೇ. ಸ್ವಾಭಿಮಾನದ ಬಗ್ಗೆ ಚರ್ಚೆ ಮಾಡಲು ಇಡೀದಿನ ಬೇಕಾಗುತ್ತದೆ. ಸೋನಿಯಾ ಗಾಂಧಿ ಕರ್ನಾಟಕಕ್ಕೆ ಬಂದು ಸ್ಪರ್ಧಿಸಿದಾಗ, ನಿಮ್ಮ ಸ್ವಾಭಿಮಾನ ಎಲ್ಲಿಗೆ ಹೋಗಿತ್ತು?’ ಎಂದು ಪ್ರಶ್ನಿಸಿದರು.