‘ನ. 6ರಂದು ಮತದಾನ ನಡೆಯಲಿದ್ದು, ಆಗ ಖಾನಾಪುರ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಅರವಿಂದ ಪಾಟೀಲ, ರಾಮದುರ್ಗದಿಂದ ಶ್ರೀಕಾಂತ ಢವಳ ಹಾಗೂ ನೇಕಾರರ ಸಹಕಾರ ಸಂಘಗಳ ಕ್ಷೇತ್ರದಿಂದ ಗಜಾನನ ನಿಂಗಪ್ಪ ಕ್ವಳ್ಳಿ ಅವರನ್ನು ಬೆಂಬಲಿಸಲಿದ್ದೇವೆ. ಸಾಮೂಹಿಕವಾಗಿ ಮತ ಹಾಕುವ ಮೂಲಕ ಅವರನ್ನು ಗೆಲ್ಲಿಸಿಕೊಳ್ಳಲು ನಿರ್ಧರಿಸಿದ್ದೇವೆ. ಈ ವಿಷಯದಲ್ಲೂ ಮುಖಂಡರೆಲ್ಲರೂ ಒಟ್ಟಾಗಿ ಹೋಗುತ್ತೇವೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.