‘ನಾಲ್ಕು ವರ್ಷಗಳಿಂದ ನೇಕಾರರು ಒಂದಿಲ್ಲೊಂದು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಜಿಎಸ್ಟಿ, ನೆರೆ, ಅತಿವೃಷ್ಟಿಯಿಂದ ಕಂಗಾಲಾಗಿದ್ದಾರೆ. ಹೋದ ವರ್ಷ ಕೋವಿಡ್ ಲಾಕ್ಡೌನ್ನಿಂದ ನಷ್ಟ ಅನುಭವಿಸಿದ್ದರು. ಈ ಬಾರಿಯೂ ಕೋವಿಡ್ನಿಂದ ನಲುಗಿ ಹೋಗಿದ್ದಾರೆ. ಆರ್ಥಿಕವಾಗಿ ತೀವ್ರ ಬಿಕ್ಕಟ್ಟು ಎದುರಾಗಿದ್ದು, ಆತ್ಮಹತ್ಯೆ ಪ್ರಕರಣಗಳು ಕೂಡ ಅಲ್ಲಲ್ಲಿ ವರದಿಯಾಗುತ್ತಿವೆ. ಹೀಗಾಗಿ, ನಮ್ಮ ಸಮಸ್ಯೆಗಳನ್ನು ಸರ್ಕಾರ ಸಹಾನುಭೂತಿಯಿಂದ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.