ಶಿಗ್ಗಾಂವಿ ತಾಲೂಕಿನ ಮುಗಳಿ ಗ್ರಾಮದ ಅವರು, ಬಿ.ಇಡಿ. ಪದವೀಧರ. ಸದ್ಯ ಹಾವೇರಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ಎಂಎ ಓದುತ್ತಿದ್ದಾರೆ. ‘ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಮತ್ತು ಸರ್ಕಾರಿ ವಲಯದ ನೌಕರಿಯಲ್ಲಿ ಮೊದಲ ಆದ್ಯತೆ ಸಿಗಬೇಕು. ಪ್ರತಿ ತಾಲ್ಲೂಕಿನಲ್ಲಿ ಭುವನೇಶ್ವರಿ ಮಂದಿರ ನಿರ್ಮಿಸಬೇಕು. ನಾಡಿನಲ್ಲಿದ್ದುಕೊಂಡು, ಸೌಲಭ್ಯಗಳನ್ನು ಅನುಭವಿಸಿ ರಾಜ್ಯದ ವಿರುದ್ಧವೇ ಮಾತಾಡುವುದನ್ನು ನಿಲ್ಲಿಸಬೇಕು’ ಎಂದು ಮಂಜುನಾಥ ಹೇಳಿದರು.