‘ಕೋವಿಡ್–19 ಕಾರಣದಿಂದ ರಮೇಶ ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ವೈದ್ಯರು ಸೋಮವಾರ ಬೆಳಿಗ್ಗೆ ಪತ್ರಕರ್ತರಿಗೆ ತಿಳಿಸಿದ್ದರು. ಆಸ್ಪತ್ರೆಗೆ ತೆರಳಿದ್ದ ವಕೀಲ ಚಂದನ ಗಿಡ್ಡನವರ, ‘ಶಾಸಕರು ಇಲ್ಲಿ ಚಿಕಿತ್ಸೆಗೆ ದಾಖಲಾಗಿಲ್ಲ’ ಎಂದು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು ಎನ್ನಲಾಗುತ್ತಿದೆ. ಆ ವಿಡಿಯೊ ಅನ್ನು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ತಮ್ಮ ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದರು. ‘ಅತ್ಯಾಚಾರ ಪ್ರಕರಣದ ಆರೋಪಿ, ಕೋವಿಡ್ ಸೋಂಕಿತ ಯಾವ ಮಂಚದ ಮೇಲೂ ಕಾಣುತ್ತಿಲ್ಲ’ ಎಂದು ಪೋಸ್ಟ್ ಹಾಕಿದ್ದರು. ಇದು ಚರ್ಚೆಗೆ ಗ್ರಾಸವಾಗಿತ್ತು ಹಾಗೂ ಗುಸುಗುಸುಗಳಿಗೂ ಕಾರಣವಾಗಿತ್ತು.