<p><strong>ಬೆಳಗಾವಿ:</strong> ಜಲಸಂಪನ್ಮೂಲ ಖಾತೆಯೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದ ರಮೇಶ ಜಾರಕಿಹೊಳಿ ‘ಸಿ.ಡಿ’ ಪ್ರಕರಣಕ್ಕೆ ಸಿಲುಕಿ ಸ್ಥಾನ ಕಳೆದುಕೊಂಡಿರುವುದರಿಂದ, ಮುಂದಿನ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗಬಹುದು ಎಂಬ ಚರ್ಚೆ ಆರಂಭವಾಗಿದೆ. ಮುಂದಿನ ಬೆಳವಣಿಗೆಗಳು ಇಲ್ಲಿನ ಜನರ ಕುತೂಹಲಕ್ಕೆ ಕಾರಣವಾಗಿವೆ.</p>.<p>ಪ್ರಸ್ತುತ ಜಿಲ್ಲೆಯಲ್ಲಿ ನಾಲ್ವರು ಸಚಿವರಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಉಪಮುಖ್ಯಮಂತ್ರಿಯೂ ಹೌದು. ಉಳಿದಂತೆ ಉಮೇಶ ಕತ್ತಿ (ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ), ಶ್ರೀಮಂತ ಪಾಟೀಲ (ಜವಳಿ) ಹಾಗೂ ಶಶಿಕಲಾ ಜೊಲ್ಲೆ (ಮಹಿಳಾ ಮತ್ತು ಮಕ್ಕಳ ಕಲ್ಯಾಣ) ಇದ್ದಾರೆ.</p>.<p>ಇವರಲ್ಲಿ ಸವದಿ ಅವರಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಜೊಲ್ಲೆ ಅವರಿಗೆ ನೆರೆಯ ವಿಜಯಪುರ ಉಸ್ತುವಾರಿ ಕೊಡಲಾಗಿದೆ. ಉಳಿದ ಇಬ್ಬರಲ್ಲಿ ಉಮೇಶ ಕತ್ತಿ ಹಿರಿಯ ಶಾಸಕರು ಹಾಗೂ ಹಿಂದೆ ಜಿಲ್ಲಾ ಉಸ್ತುವಾರಿ ನಿಭಾಯಿಸಿದ ಅನುಭವಿ. ಈ ನಿಟ್ಟಿನಲ್ಲಿ ನೋಡಿದರೆ ಅವರಿಗೆ ಅವಕಾಶ ದೊರೆಯುವ ಸಾಧ್ಯತೆಗಳು ದಟ್ಟವಾಗಿವೆ ಎನ್ನುತ್ತವೆ ಪಕ್ಷದ ಮೂಲಗಳು.</p>.<p>ಇನ್ನೊಂದೆಡೆ, ತೆರವಾದ ಸ್ಥಾನಕ್ಕೆ ಕೆಎಂಎಫ್ ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಪರಿಗಣಿಸಿದಲ್ಲಿ ಅವರಿಗೆ ಉಸ್ತುವಾರಿ ಸಿಗಬಹುದು ಎಂದೂ ಹೇಳಲಾಗುತ್ತಿದೆ. ಅವರೂ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಲಸಂಪನ್ಮೂಲ ಖಾತೆಯೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದ ರಮೇಶ ಜಾರಕಿಹೊಳಿ ‘ಸಿ.ಡಿ’ ಪ್ರಕರಣಕ್ಕೆ ಸಿಲುಕಿ ಸ್ಥಾನ ಕಳೆದುಕೊಂಡಿರುವುದರಿಂದ, ಮುಂದಿನ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗಬಹುದು ಎಂಬ ಚರ್ಚೆ ಆರಂಭವಾಗಿದೆ. ಮುಂದಿನ ಬೆಳವಣಿಗೆಗಳು ಇಲ್ಲಿನ ಜನರ ಕುತೂಹಲಕ್ಕೆ ಕಾರಣವಾಗಿವೆ.</p>.<p>ಪ್ರಸ್ತುತ ಜಿಲ್ಲೆಯಲ್ಲಿ ನಾಲ್ವರು ಸಚಿವರಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಉಪಮುಖ್ಯಮಂತ್ರಿಯೂ ಹೌದು. ಉಳಿದಂತೆ ಉಮೇಶ ಕತ್ತಿ (ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ), ಶ್ರೀಮಂತ ಪಾಟೀಲ (ಜವಳಿ) ಹಾಗೂ ಶಶಿಕಲಾ ಜೊಲ್ಲೆ (ಮಹಿಳಾ ಮತ್ತು ಮಕ್ಕಳ ಕಲ್ಯಾಣ) ಇದ್ದಾರೆ.</p>.<p>ಇವರಲ್ಲಿ ಸವದಿ ಅವರಿಗೆ ರಾಯಚೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಜೊಲ್ಲೆ ಅವರಿಗೆ ನೆರೆಯ ವಿಜಯಪುರ ಉಸ್ತುವಾರಿ ಕೊಡಲಾಗಿದೆ. ಉಳಿದ ಇಬ್ಬರಲ್ಲಿ ಉಮೇಶ ಕತ್ತಿ ಹಿರಿಯ ಶಾಸಕರು ಹಾಗೂ ಹಿಂದೆ ಜಿಲ್ಲಾ ಉಸ್ತುವಾರಿ ನಿಭಾಯಿಸಿದ ಅನುಭವಿ. ಈ ನಿಟ್ಟಿನಲ್ಲಿ ನೋಡಿದರೆ ಅವರಿಗೆ ಅವಕಾಶ ದೊರೆಯುವ ಸಾಧ್ಯತೆಗಳು ದಟ್ಟವಾಗಿವೆ ಎನ್ನುತ್ತವೆ ಪಕ್ಷದ ಮೂಲಗಳು.</p>.<p>ಇನ್ನೊಂದೆಡೆ, ತೆರವಾದ ಸ್ಥಾನಕ್ಕೆ ಕೆಎಂಎಫ್ ಅಧ್ಯಕ್ಷರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಪರಿಗಣಿಸಿದಲ್ಲಿ ಅವರಿಗೆ ಉಸ್ತುವಾರಿ ಸಿಗಬಹುದು ಎಂದೂ ಹೇಳಲಾಗುತ್ತಿದೆ. ಅವರೂ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>