<p><strong>ಬೆಳಗಾವಿ:</strong> ‘ವಿದ್ಯಾರ್ಥಿಗಳ ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ಕಲಿಕಾ ಗುಣಮಟ್ಟ ಸುಧಾರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರು ಪ್ರಯತ್ನಿಸಬೇಕು’ ಎಂದುರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎಂ.ಬಿ.ಎ. ವಿಭಾಗದ ಪ್ರಾಧ್ಯಾಪಕ ವಿಷ್ಣುಕಾಂತ ಚಟಪಳ್ಳಿ ಹೇಳಿದರು.</p>.<p>ಇಲ್ಲಿನ ಭಾವುರಾವ ಕಾಕತಕರ ಕಾಲೇಜಿನಲ್ಲಿ ಬೆಂಗಳೂರಿನ ನ್ಯಾಕ್ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳ ಏಳ್ಗೆಯಾಗದ ಹೊರತು ಸಾಮಾಜಿಕ ಬದಲಾವಣೆ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ನೂತನ ಕಾರ್ಯಕ್ರಮ ರೂಪಿಸಬೇಕಿದೆ’ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಎಸ್.ಎನ್. ಪಾಟೀಲ ಮಾತನಾಡಿದರು. ಡಿ.ಎನ್. ಮೀಸಾಳೆ, ಪ್ರೊ.ಎಂ.ಎನ್. ದೇಸಾಯಿ ಇದ್ದರು. ಎ.ಎಸ್. ಕುಲಕರ್ಣಿ ಸ್ವಾಗತಿಸಿದರು. ಪ್ರೊ.ಎಂ.ಎನ್. ದೇಸಾಯಿ ವಂದಿಸಿದರು. ಭಕ್ತಿ ದೇಸಾಯಿ ನಿರೂಪಿಸಿದರು.</p>.<p>ನಂತರ ನಡೆದ ಗೋಷ್ಠಿಗಳಲ್ಲಿ ಪ್ರಾಚಾರ್ಯ ಎಸ್.ಎಸ್. ಗವತಿ, ಕೊಲ್ಲಾಪುರದ ಎಸ್.ಆರ್. ಕುಲಕರ್ಣಿ ಮಾತನಾಡಿದರು. ವಿವಿಧ ಕಾಲೇಜುಗಳ ಪ್ರಾಧ್ಯಾಪಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ವಿದ್ಯಾರ್ಥಿಗಳ ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ಕಲಿಕಾ ಗುಣಮಟ್ಟ ಸುಧಾರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರು ಪ್ರಯತ್ನಿಸಬೇಕು’ ಎಂದುರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎಂ.ಬಿ.ಎ. ವಿಭಾಗದ ಪ್ರಾಧ್ಯಾಪಕ ವಿಷ್ಣುಕಾಂತ ಚಟಪಳ್ಳಿ ಹೇಳಿದರು.</p>.<p>ಇಲ್ಲಿನ ಭಾವುರಾವ ಕಾಕತಕರ ಕಾಲೇಜಿನಲ್ಲಿ ಬೆಂಗಳೂರಿನ ನ್ಯಾಕ್ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳ ಏಳ್ಗೆಯಾಗದ ಹೊರತು ಸಾಮಾಜಿಕ ಬದಲಾವಣೆ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ನೂತನ ಕಾರ್ಯಕ್ರಮ ರೂಪಿಸಬೇಕಿದೆ’ ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಎಸ್.ಎನ್. ಪಾಟೀಲ ಮಾತನಾಡಿದರು. ಡಿ.ಎನ್. ಮೀಸಾಳೆ, ಪ್ರೊ.ಎಂ.ಎನ್. ದೇಸಾಯಿ ಇದ್ದರು. ಎ.ಎಸ್. ಕುಲಕರ್ಣಿ ಸ್ವಾಗತಿಸಿದರು. ಪ್ರೊ.ಎಂ.ಎನ್. ದೇಸಾಯಿ ವಂದಿಸಿದರು. ಭಕ್ತಿ ದೇಸಾಯಿ ನಿರೂಪಿಸಿದರು.</p>.<p>ನಂತರ ನಡೆದ ಗೋಷ್ಠಿಗಳಲ್ಲಿ ಪ್ರಾಚಾರ್ಯ ಎಸ್.ಎಸ್. ಗವತಿ, ಕೊಲ್ಲಾಪುರದ ಎಸ್.ಆರ್. ಕುಲಕರ್ಣಿ ಮಾತನಾಡಿದರು. ವಿವಿಧ ಕಾಲೇಜುಗಳ ಪ್ರಾಧ್ಯಾಪಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>