‘ಪತ್ನಿ, ಅತ್ತೆ ಹಾಗೂ ಮಾವ ನಾಪತ್ತೆ ಆಗಿದ್ದರಿಂದ ನಾನು ಪೊಲೀಸರಿಗೆ ದೂರು ನೀಡಿದ್ದೆ. ಅವರು ಆರೋಪಿ, ಮಂತ್ರವಾದಿ ಶಿವಾನಂದ ವಾಲಿಯನ್ನು ಬಂಧಿಸಿದ್ದಾರೆ. ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಏನು ಆಗಬೇಕೋ ಆಗುತ್ತದೆ. ಪತ್ನಿ, ಅತ್ತೆ, ಮಾವ ಕ್ಷೇಮವಾಗಿ ಅವರ ಸಂಬಂಧಿಕರ ಮನೆಯಲ್ಲಿ ನೆಮ್ಮದಿಯಾಗಿದ್ದಾರೆ. ಹೀಗಾಗಿ, ನಿರಾಳತೆಯಿಂದ ಬೆಂಗಳೂರಿಗೆ ಹೋಗುತ್ತಿದ್ದೇನೆ’ ಎಂದು ತಿಳಿಸಿದರು.