‘ಹಳೆಗನ್ನಡ ಮರು ಓದು, ಗಮಕ ವಾಚನ, ಜಾನಪದ ಕಲಾ ಪ್ರದರ್ಶನ, ವಿಶೇಷ ಸಾಹಿತ್ಯ ಕಮ್ಮಟ, ಪುಸ್ತಕ ಮೇಳ ಆಯೋಜನೆ, ಗಡಿ ಭಾಗದ ಕನ್ನಡ ಶಾಲೆಗಳನ್ನು ದತ್ತು ಪಡೆದು ಸಬಲೀಕರಣಗೊಳಿಸುವ ಯೋಜನೆ ಇದೆ. ನಗರ, ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ಬಡಾವಣೆಗಳಿಗೆ ಸಾಹಿತಿಗಳು ಮತ್ತು ಕನ್ನಡ ಹೋರಾಟಗಾರರ ಹೆಸರು ನಾಮಕರಣಕ್ಕೆ ಕ್ರಮ ಕೈಗೊಳ್ಳುವೆ. ಕನ್ನಡ ಕುಲೋದ್ಧಾರಕ ಮಾಲಿಕೆಯಲ್ಲಿ ಕಿರುಹೊತ್ತಿಗೆಗಳನ್ನು ಪ್ರಕಟಿಸುವ ಯೋಜನೆ ಇದೆ. ಸದಸ್ಯರು ಬೆಂಬಲಿಸಬೇಕು’ ಎಂದು ಕೋರಿದರು.