‘ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತರನ್ನು ಅಭಿನಂದಿಸುವುದು, ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣಾ ಸಿದ್ಧತೆಗೆ ರಣಕಹಳೆ ಮೊಳಗಿಸುವುದು ಸಮಾವೇಶದ ಉದ್ದೇಶವಾಗಿದೆ. ಇದರಿಂದ ಈ ಭಾಗದಲ್ಲಿ ಪಕ್ಷದ ಶಕ್ತಿ ವೃದ್ಧಿಸಲಿದೆ. ಜಿಲ್ಲೆಯ ಎಲ್ಲ ಮುಖಂಡರೂ ಸಂಘಟಿತರಾಗಿ ಸಮಾವೇಶ ಯಶಸ್ವಿಗೊಳಿಸಲು ಶ್ರಮಿಸುತ್ತಿದ್ದೇವೆ’ ಎಂದರು.