‘ಈ ಭಾಗದಲ್ಲಿ ಬರ ಬೆಂಬಿಡದೆ ಕಾಡುತ್ತಿದೆ. ಇದರಿಂದ ಜನರಿಗೆ ಮುಕ್ತಿ ಕೊಡಲು ತಯಾರಿಯಲ್ಲಿದ್ದೇವೆ. ಕಷ್ಟಪಟ್ಟು ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಕೆಲಸ ಬಿಟ್ಟು ಬೇರಾವುದಕ್ಕೂ ತಲೆಕಡಿಸಿಕೊಳ್ಳುವುದಿಲ್ಲ. ಕ್ಷೇತ್ರದ ಜನತೆಗೆ ಅನ್ಯಾಯವಾಗಲು ಬಿಡುವುದಿಲ್ಲ. ಆದರೆ, ವೈಯಕ್ತಿಕ ಕೆಲಸಗಳಿಗಿಂತ ಸಾರ್ವಜನಿಕ ಕೆಲಸಗಳಿಗೆ ಹೆಚ್ಚೆಚ್ಚು ಒತ್ತು ಕೊಡುವುದನ್ನು ನಮ್ಮ ಕಾರ್ಯಕರ್ತರು ಮಾಡಬೇಕು. ನಾನು ರಾಜಕೀಯಕ್ಕೆ ಬಂದಿದ್ದು ಅಧಿಕಾರ ಅನುಭವಿಸಲು ಅಲ್ಲ. ಜನ ಸೇವೆ ಮಾಡಲು ಬಂದಿದ್ದೇನೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬದಿಗಿಟ್ಟು ಜನರ ಹಿತಕ್ಕೆ ಕೈ ಜೋಡಿಸಬೇಕು’ ಎಂದರು.