<p><strong>ಬೆಳಗಾವಿ: </strong>‘ಸೋಯಾಬೀನ್ ಬಿತ್ತನೆ ಬೀಜಗಳು ಸರಿಯಾಗಿ ಮೊಳಕೆ ಬಾರದೆ ನಷ್ಟ ಅನುಭವಿಸಿರುವ ರೈತರಿಗೆ ಎಕರೆಗೆ ₹ 3ಸಾವಿರ ಪರಿಹಾರವನ್ನು ಆಯಾ ಕಂಪನಿಗಳಿಂದಲೇ ಕೊಡಿಸಲಾಗುವುದು’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.</p>.<p>ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸರ್ಕಾರದಿಂದ ಪರಿಹಾರ ಕೊಡುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ’ ಎಂದರು.</p>.<p>‘ಜಿಲ್ಲೆಯಲ್ಲಿ 7,700 ಎಕರೆ ಪ್ರದೇಶದಲ್ಲಿ ಬಿತ್ತನೆ ಸೋಯಾಬೀನ್ ಬೀಜಗಳು ಸಮರ್ಪಕವಾಗಿ ಮೊಳಕೆ ಬಾರದಿರುವ ಕುರಿತು ವರದಿ ಬಂದಿದೆ. ರಾಜ್ಯದ ಇತರ ಜಿಲ್ಲೆಗಳ ಮಾಹಿತಿ ಇನ್ನೂ ದೊರೆತಿಲ್ಲ. ಈ ಹಂಗಾಮಿನಲ್ಲಿ ಮೊಳಕೆ ಪ್ರಮಾಣ ಕಡಿಮೆ ಇರಲಿದೆ ಎಂದು ರೈತರಿಗೆ ಮೊದಲೇ ತಿಳಿಸಿದ್ದೆವು’ ಎಂದು ಹೇಳಿದರು.</p>.<p>‘ಯೂರಿಯಾ ಮೊದಲಾದ ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲಾಗಿದೆ. ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಯೂರಿಯಾ ಮಾರುತ್ತಿದ್ದ 117 ರಸಗೊಬ್ಬರ ಅಂಗಡಿಗಳ ಪರವಾನಗಿ ರದ್ದುಪಡಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಸೋಯಾಬೀನ್ ಬಿತ್ತನೆ ಬೀಜಗಳು ಸರಿಯಾಗಿ ಮೊಳಕೆ ಬಾರದೆ ನಷ್ಟ ಅನುಭವಿಸಿರುವ ರೈತರಿಗೆ ಎಕರೆಗೆ ₹ 3ಸಾವಿರ ಪರಿಹಾರವನ್ನು ಆಯಾ ಕಂಪನಿಗಳಿಂದಲೇ ಕೊಡಿಸಲಾಗುವುದು’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.</p>.<p>ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸರ್ಕಾರದಿಂದ ಪರಿಹಾರ ಕೊಡುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ’ ಎಂದರು.</p>.<p>‘ಜಿಲ್ಲೆಯಲ್ಲಿ 7,700 ಎಕರೆ ಪ್ರದೇಶದಲ್ಲಿ ಬಿತ್ತನೆ ಸೋಯಾಬೀನ್ ಬೀಜಗಳು ಸಮರ್ಪಕವಾಗಿ ಮೊಳಕೆ ಬಾರದಿರುವ ಕುರಿತು ವರದಿ ಬಂದಿದೆ. ರಾಜ್ಯದ ಇತರ ಜಿಲ್ಲೆಗಳ ಮಾಹಿತಿ ಇನ್ನೂ ದೊರೆತಿಲ್ಲ. ಈ ಹಂಗಾಮಿನಲ್ಲಿ ಮೊಳಕೆ ಪ್ರಮಾಣ ಕಡಿಮೆ ಇರಲಿದೆ ಎಂದು ರೈತರಿಗೆ ಮೊದಲೇ ತಿಳಿಸಿದ್ದೆವು’ ಎಂದು ಹೇಳಿದರು.</p>.<p>‘ಯೂರಿಯಾ ಮೊದಲಾದ ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲಾಗಿದೆ. ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಯೂರಿಯಾ ಮಾರುತ್ತಿದ್ದ 117 ರಸಗೊಬ್ಬರ ಅಂಗಡಿಗಳ ಪರವಾನಗಿ ರದ್ದುಪಡಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>