ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತಿ ಕನಸು ನನಸಾಗಿಸುವೆ: ಮಂಗಲಾ

Last Updated 10 ಜುಲೈ 2021, 16:50 IST
ಅಕ್ಷರ ಗಾತ್ರ

ಬೆಳಗಾವಿ: ನಗರದ ಲಕ್ಷ್ಮೀಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಗೆ ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಶನಿವಾರ ಭೇಟಿ ನೀಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿ, ‘ಹುಕ್ಕೇರಿ ಶ್ರೀಗಳ ಮೇಲೆ ಪತಿ ದಿವಂಗತ ಸುರೇಶ ಅಂಗಡಿ ವಿಶೇಷ ಶ್ರದ್ಧೆ ಇಟ್ಟುಕೊಂಡಿದ್ದರು. ಅವರ ಮಾರ್ಗದರ್ಶನದಲ್ಲಿ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಕನಸನ್ನು ನಾನು ನನಸು ಮಾಡುತ್ತೇನೆ. ಜಿಲ್ಲೆಯ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ’ ಎಂದು ಹೇಳಿದರು.

‘ದಿ.ಸುರೇಶ ಅಂಗಡಿ ಅವರು ಸಂಸದರಾಗಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಅವರ ಸ್ಥಾನವನ್ನು ಸಂಸದೆಯಾಗಿ ಮಂಗಲಾ ತುಂಬಲಿ. ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಿಕೊಡಲಿ’ ಎಂದು ಸ್ವಾಮೀಜಿ ಹಾರೈಸಿದರು.

ವಿರೂಪಾಕ್ಷಯ್ಯ ನೀರಲಗಿಮಠ, ಸೋಮಶೇಖರ ಹಿರೇಮಠ, ಸಂಗಯ್ಯ ಶಾಸ್ತ್ರಿ, ಚಂದ್ರಶೇಖರ ಶಾಸ್ತ್ರಿ, ಶಂಕರಯ್ಯ ಶಾಸ್ತ್ರಿ, ಶಿವಾನಂದ ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT