<p><strong>ಬೆಳಗಾವಿ</strong>: ನಗರದ ಲಕ್ಷ್ಮೀಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಗೆ ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಶನಿವಾರ ಭೇಟಿ ನೀಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದರು.</p>.<p>ಈ ವೇಳೆ ಮಾತನಾಡಿ, ‘ಹುಕ್ಕೇರಿ ಶ್ರೀಗಳ ಮೇಲೆ ಪತಿ ದಿವಂಗತ ಸುರೇಶ ಅಂಗಡಿ ವಿಶೇಷ ಶ್ರದ್ಧೆ ಇಟ್ಟುಕೊಂಡಿದ್ದರು. ಅವರ ಮಾರ್ಗದರ್ಶನದಲ್ಲಿ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಕನಸನ್ನು ನಾನು ನನಸು ಮಾಡುತ್ತೇನೆ. ಜಿಲ್ಲೆಯ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ’ ಎಂದು ಹೇಳಿದರು.</p>.<p>‘ದಿ.ಸುರೇಶ ಅಂಗಡಿ ಅವರು ಸಂಸದರಾಗಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಅವರ ಸ್ಥಾನವನ್ನು ಸಂಸದೆಯಾಗಿ ಮಂಗಲಾ ತುಂಬಲಿ. ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಿಕೊಡಲಿ’ ಎಂದು ಸ್ವಾಮೀಜಿ ಹಾರೈಸಿದರು.</p>.<p>ವಿರೂಪಾಕ್ಷಯ್ಯ ನೀರಲಗಿಮಠ, ಸೋಮಶೇಖರ ಹಿರೇಮಠ, ಸಂಗಯ್ಯ ಶಾಸ್ತ್ರಿ, ಚಂದ್ರಶೇಖರ ಶಾಸ್ತ್ರಿ, ಶಂಕರಯ್ಯ ಶಾಸ್ತ್ರಿ, ಶಿವಾನಂದ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನಗರದ ಲಕ್ಷ್ಮೀಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಗೆ ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಶನಿವಾರ ಭೇಟಿ ನೀಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದರು.</p>.<p>ಈ ವೇಳೆ ಮಾತನಾಡಿ, ‘ಹುಕ್ಕೇರಿ ಶ್ರೀಗಳ ಮೇಲೆ ಪತಿ ದಿವಂಗತ ಸುರೇಶ ಅಂಗಡಿ ವಿಶೇಷ ಶ್ರದ್ಧೆ ಇಟ್ಟುಕೊಂಡಿದ್ದರು. ಅವರ ಮಾರ್ಗದರ್ಶನದಲ್ಲಿ ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಕನಸನ್ನು ನಾನು ನನಸು ಮಾಡುತ್ತೇನೆ. ಜಿಲ್ಲೆಯ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ’ ಎಂದು ಹೇಳಿದರು.</p>.<p>‘ದಿ.ಸುರೇಶ ಅಂಗಡಿ ಅವರು ಸಂಸದರಾಗಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಅವರ ಸ್ಥಾನವನ್ನು ಸಂಸದೆಯಾಗಿ ಮಂಗಲಾ ತುಂಬಲಿ. ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಿಕೊಡಲಿ’ ಎಂದು ಸ್ವಾಮೀಜಿ ಹಾರೈಸಿದರು.</p>.<p>ವಿರೂಪಾಕ್ಷಯ್ಯ ನೀರಲಗಿಮಠ, ಸೋಮಶೇಖರ ಹಿರೇಮಠ, ಸಂಗಯ್ಯ ಶಾಸ್ತ್ರಿ, ಚಂದ್ರಶೇಖರ ಶಾಸ್ತ್ರಿ, ಶಂಕರಯ್ಯ ಶಾಸ್ತ್ರಿ, ಶಿವಾನಂದ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>