ಸ್ವಾತಂತ್ರ್ಯ ಹೋರಾಟಗಾರರ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾವೇರಿ ಹಾಗೂ ಬೆಳಗಾವಿಯ ಅಖಿಲ ಕರ್ನಾಟಕ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿಗಳ ಸಂಘದವರು ಪ್ರತಿಭಟಿಸಿದರು. ಪಂಜಾಬ್ ಮಾದರಿಯಲ್ಲಿ ಕರ್ನಾಟಕದಲ್ಲೂ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಸೌಕರ್ಯ ಕಲ್ಪಿಸಬೇಕು. ಸ್ವಾತಂತ್ರ್ಯ ಹೋರಾಟಗಾರರು ಮೃತಪಟ್ಟಾಗ, ಅವರ ಅಂತ್ಯಸಂಸ್ಕಾರಕ್ಕೆ ರಾಜ್ಯ ಸರ್ಕಾರ ನೀಡುವ ಮೊತ್ತವನ್ನು ₹4 ಸಾವಿರದಿಂದ ₹10 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಸ್ವಾತಂತ್ರ್ಯ ಹೋರಾಟಗಾರರಾದ ರಾಜೇಂದ್ರ ಕಲಘಟಗಿ, ಭೀಮಪ್ಪ ಗಡಾದ, ಮುರುಗೆಪ್ಪ ಶೆಟ್ಟರ್, ಬಸವರಾಜ ಹಟ್ಟಿಗೌಡರ, ಶಿವಯೋಗಯ್ಯ ಲೋಕನಗೌಡ್ರ ಇತರರಿದ್ದರು.