ಘಟನೆಯ ವಿಡಿಯೊ ತುಣುಕುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಇದರಿಂದ ಗ್ರಾಮಕ್ಕೆ ಬಂದ ಬೆಳಗಾವಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿ, ಅಥಣಿ ಡಿವೈಎಸ್ಪಿ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೋಡಿ, ಕಾಗವಾಡ ತಹಶೀಲ್ದಾರ್ ಸಂಜಯ ಇಂಗಳೆ ಅವರ ತಂಡ ಸಂತ್ರಸ್ತೆ ಮತ್ತು ಕುಟುಂಬದಿಂದ ಮಾಹಿತಿ ಕಲೆ ಹಾಕಿತು.