ಉಗರಗೋಳ (ಬೆಳಗಾವಿ ಜಿಲ್ಲೆ): ಸಮೀಪದ ದಢೇರಕೊಪ್ಪ ಗ್ರಾಮದಲ್ಲಿ ಬುಧವಾರ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ದಢೇರಕೊಪ್ಪ ನಿವಾಸಿ ಕವಿತಾ ಸಿದ್ದಪ್ಪ ಕರಿಕಟ್ಟಿ(23) ಮೃತರು. ಎಂದಿನಂತೆ ಹೊಲದಲ್ಲಿ ಕೆಲಸ ಮಾಡಿ ಸಂಜೆ ಮನೆಗೆ ಮರಳುವಾಗ ಸಿಡಿಲೆರಗಿದೆ. ಮಹಿಳೆ ಸ್ಥಳದಲ್ಲೇ ಅಸುನೀಗಿದರು ಎಂದು ಪೊಲೀಸರು ತಿಳಿಸಿದ್ದಾರೆ.