<p><strong>ಬೈಲಹೊಂಗಲ</strong>: ತಾಲ್ಲೂಕಿನ ಉಡಿಕೇರಿ ಗ್ರಾಮದಲ್ಲಿ ಮಂಗಳವಾರ ನಸುಕಿನಲ್ಲಿ ಮಹಿಳೆಯೊಬ್ಬರ ಕುತ್ತಿಗೆಗೆ ಚಾಕು ಇರಿದು, ಚಿನ್ನದ ಮಾಂಗಲ್ಯ ದೋಚುವ ಯತ್ನ ನಡೆದಿದೆ. ಮಾಂಗಲ್ಯ ಸರ ಉಳಿಸಿಕೊಳ್ಳಲು ಇಬ್ಬರು ಕಳ್ಳರೊಂದಿಗೆ ಹೋರಾಡಿದ ಮಹಿಳೆ ತೀವ್ರ ಗಾಯಗೊಂಡಿದ್ದಾರೆ.</p><p>ರೇಣುಕಾ ಕೆಂಚಪ್ಪ ದೋಡ್ಲಿ (27) ದುಷ್ಕರ್ಮಿಗಳಿಗೆ ಪ್ರತಿರೋಧ ವ್ಯಕ್ತಪಡಿಸಿ, ತಮ್ಮ ಮಾಂಗಲ್ಯ ಸರ ಉಳಿಸಿಕೊಂಡ ಮಹಿಳೆ.</p><p>ಗ್ರಾಮದ ಹೆದ್ದಾರಿಯಲ್ಲಿ ರೇಣುಕಾ ಕೆಂಚಪ್ಪ ದೋಡ್ಲಿ (27), ಗೀತಾ ಸೋಮಲಿಂಗಪ್ಪ (28) ಎಂದಿನಂತೆ ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದರು.</p><p>ಈ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರೇಣುಕಾ ಅವರ ಕುತ್ತಿಗೆಗೆ ಕೈ ಹಾಕಿ ಮಾಂಗಲ್ಯ ಸರ ದೋಚಲು ಮುಂದಾದರು. ಕುತ್ತಿಗೆಗೆ ಕೈ ಹಾಕಿದ ಕಳ್ಳನನ್ನು ರೇಣುಕಾ ಗಟ್ಟಿಯಾಗಿ ಹಿಡಿದುಕೊಂಡರು. ಅವರಿಂದ ಬಿಡಿಸಿಕೊಳ್ಳಲು ಕಳ್ಳರು ಕುತ್ತಿಗೆ, ಕೈಗೆ ಜಾಕುವಿನಿಂದ ಇರಿದು, ನಂತರ ಪರಾರಿಯಾದರು.</p><p>ರೇಣುಕಾ ಅವರ ಕತ್ತು ಹಾಗೂ ಕೈಯಿಂದ ರಕ್ತ ಹರಿದಿದೆ. ಈ ವಿಡಿಯೊ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. </p><p>ಪಿಎಸ್ಐ ಪ್ರವೀಣ ಕೋಟಿ ಭೇಟಿ ನೀಡಿ ಪರಿಶೀಲಿಸಿದಾಗ ಮಾಂಗಲ್ಯ ಸರ ಸ್ಥಳದಲ್ಲಿಯೇ ಸಿಕ್ಕಿದೆ. ಗಾಯಾಳು ಮಹಿಳೆಯನ್ನು ಬೆಳವಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಪ್ರಕರಣ ದೊಡವಾಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ</strong>: ತಾಲ್ಲೂಕಿನ ಉಡಿಕೇರಿ ಗ್ರಾಮದಲ್ಲಿ ಮಂಗಳವಾರ ನಸುಕಿನಲ್ಲಿ ಮಹಿಳೆಯೊಬ್ಬರ ಕುತ್ತಿಗೆಗೆ ಚಾಕು ಇರಿದು, ಚಿನ್ನದ ಮಾಂಗಲ್ಯ ದೋಚುವ ಯತ್ನ ನಡೆದಿದೆ. ಮಾಂಗಲ್ಯ ಸರ ಉಳಿಸಿಕೊಳ್ಳಲು ಇಬ್ಬರು ಕಳ್ಳರೊಂದಿಗೆ ಹೋರಾಡಿದ ಮಹಿಳೆ ತೀವ್ರ ಗಾಯಗೊಂಡಿದ್ದಾರೆ.</p><p>ರೇಣುಕಾ ಕೆಂಚಪ್ಪ ದೋಡ್ಲಿ (27) ದುಷ್ಕರ್ಮಿಗಳಿಗೆ ಪ್ರತಿರೋಧ ವ್ಯಕ್ತಪಡಿಸಿ, ತಮ್ಮ ಮಾಂಗಲ್ಯ ಸರ ಉಳಿಸಿಕೊಂಡ ಮಹಿಳೆ.</p><p>ಗ್ರಾಮದ ಹೆದ್ದಾರಿಯಲ್ಲಿ ರೇಣುಕಾ ಕೆಂಚಪ್ಪ ದೋಡ್ಲಿ (27), ಗೀತಾ ಸೋಮಲಿಂಗಪ್ಪ (28) ಎಂದಿನಂತೆ ಬೆಳಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದರು.</p><p>ಈ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರೇಣುಕಾ ಅವರ ಕುತ್ತಿಗೆಗೆ ಕೈ ಹಾಕಿ ಮಾಂಗಲ್ಯ ಸರ ದೋಚಲು ಮುಂದಾದರು. ಕುತ್ತಿಗೆಗೆ ಕೈ ಹಾಕಿದ ಕಳ್ಳನನ್ನು ರೇಣುಕಾ ಗಟ್ಟಿಯಾಗಿ ಹಿಡಿದುಕೊಂಡರು. ಅವರಿಂದ ಬಿಡಿಸಿಕೊಳ್ಳಲು ಕಳ್ಳರು ಕುತ್ತಿಗೆ, ಕೈಗೆ ಜಾಕುವಿನಿಂದ ಇರಿದು, ನಂತರ ಪರಾರಿಯಾದರು.</p><p>ರೇಣುಕಾ ಅವರ ಕತ್ತು ಹಾಗೂ ಕೈಯಿಂದ ರಕ್ತ ಹರಿದಿದೆ. ಈ ವಿಡಿಯೊ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. </p><p>ಪಿಎಸ್ಐ ಪ್ರವೀಣ ಕೋಟಿ ಭೇಟಿ ನೀಡಿ ಪರಿಶೀಲಿಸಿದಾಗ ಮಾಂಗಲ್ಯ ಸರ ಸ್ಥಳದಲ್ಲಿಯೇ ಸಿಕ್ಕಿದೆ. ಗಾಯಾಳು ಮಹಿಳೆಯನ್ನು ಬೆಳವಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಪ್ರಕರಣ ದೊಡವಾಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>