ಸಂತ್ರಸ್ತೆಯು ಸರ್ವೆ ನಂ.237/‘ಎ’ ಸರ್ಕಾರದಿಂದ ಜಮೀನು ಮಂಜೂರು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿತರು ಜಮೀನಿನ ಒತ್ತುವರಿ ಹಾಗೂ ರಸ್ತೆ ಬಂದ್ ಮಾಡಿದರಿಂದ ಕೇಳಲು ಹೊದ ಸಂತ್ರಸ್ತೆಯನ್ನು ವಿವಸ್ತ್ರಗೊಳಿಸಿದ್ದಲ್ಲದೆ ಹಲ್ಲೆಯನ್ನೂ ನಡೆಸಿದ್ದರು ಎನ್ನಲಾಗಿತ್ತು. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣ ದೃಶ್ಯ ಮಾಧ್ಯಮಗಳಲ್ಲಿ ಹರಿದಾಡಿದ್ದರಿಂದ, ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಹಾಗೂ ತಾಲ್ಲೂಕು ಆಡಳಿತ ಗಂಭೀರವಾಗಿ ಪರಿಗಣಿಸಿ ಸ್ಥಳ ಪರಿಶೀಲನೆ ನಡೆಸಿ ಜಮೀನು ಹಾಗೂ ರಸ್ತೆ ಸರಿಪಡಿಸುವ ಕಾರ್ಯ ಮಾ.1ರಂದು ಆರಂಭಿಸಿದ್ದರು.