<p><strong>ಖಾನಾಪುರ</strong>: ಪಟ್ಟಣದ ಶನಾಯಾ ಪಾಮ್ಸ್ ಸಭಾಗೃಹದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಠಿ ಜರುಗಿತು. 100ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ವಿದ್ಯಾರ್ಥಿವೇತನದ ಆದೇಶ ಪ್ರತಿ ವಿತರಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಅಂಜಲಿ ನಿಂಬಾಳಕರ, ‘ಮಹಿಳೆಯರ ಸಬಲೀಕರಣ ಅಗತ್ಯವಿದೆ. ರಾಜಕೀಯ ರಂಗದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳಿದ್ದು, ಸ್ವಯಂಪ್ರೇರಿತರಾಗಿ ರಾಜಕೀಯಕ್ಕೆ ಬರಬೇಕು’ ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ವೈದ್ಯಾಧಿಕಾರಿ ಡಾ. ಮಹೇಶ ಕಿವಡಸಣ್ಣವರ, ಸ್ತ್ರೀರೋಗಗಳು, ರೋಗ ಹತೋಟಿ, ಒತ್ತಡ ನಿರ್ವಹಣೆ, ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು. ಮಹಿಳೆಯರ ರೋಗ್ಯ ತಪಾಸಣಾ ಶಿಬಿರ ಜರುಗಿತು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ದೀಪಾ ಪಾಟೀಲ, ಯಲ್ಲಪ್ಪ ಸಾಗರ, ಜ್ಞಾನವಿಕಾಸ ಯೋಜನಾಧಿಕಾರಿ ಸುಧಾ ನಾಯ್ಕ, ಗಣಪತಿ ನಾಯ್ಕ, ಮೇಲ್ವಿಚಾರಕ ಯದುನಂದ ಎಲ್., ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾನಾಪುರ</strong>: ಪಟ್ಟಣದ ಶನಾಯಾ ಪಾಮ್ಸ್ ಸಭಾಗೃಹದಲ್ಲಿ ಶನಿವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಠಿ ಜರುಗಿತು. 100ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ವಿದ್ಯಾರ್ಥಿವೇತನದ ಆದೇಶ ಪ್ರತಿ ವಿತರಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಅಂಜಲಿ ನಿಂಬಾಳಕರ, ‘ಮಹಿಳೆಯರ ಸಬಲೀಕರಣ ಅಗತ್ಯವಿದೆ. ರಾಜಕೀಯ ರಂಗದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳಿದ್ದು, ಸ್ವಯಂಪ್ರೇರಿತರಾಗಿ ರಾಜಕೀಯಕ್ಕೆ ಬರಬೇಕು’ ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ವೈದ್ಯಾಧಿಕಾರಿ ಡಾ. ಮಹೇಶ ಕಿವಡಸಣ್ಣವರ, ಸ್ತ್ರೀರೋಗಗಳು, ರೋಗ ಹತೋಟಿ, ಒತ್ತಡ ನಿರ್ವಹಣೆ, ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು. ಮಹಿಳೆಯರ ರೋಗ್ಯ ತಪಾಸಣಾ ಶಿಬಿರ ಜರುಗಿತು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬೈಲೂರಕರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ದೀಪಾ ಪಾಟೀಲ, ಯಲ್ಲಪ್ಪ ಸಾಗರ, ಜ್ಞಾನವಿಕಾಸ ಯೋಜನಾಧಿಕಾರಿ ಸುಧಾ ನಾಯ್ಕ, ಗಣಪತಿ ನಾಯ್ಕ, ಮೇಲ್ವಿಚಾರಕ ಯದುನಂದ ಎಲ್., ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>