ಮಾಲು ಯಲ್ಲಪ್ಪ ಚೌಗಲೆ (55) ಸಾವಿನ ಕದ ತಟ್ಟಿ ಬಂದವರು. ವಿಪರೀತ ತಲೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿತ್ತು. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದರು. ಆದರೆ, ಪರಿಸ್ಥಿತಿ ಚಿಂತಾಜನಕವಾಗಿದ್ದರಿಂದ ಹಾಗೂ ಪ್ರಜ್ಞೆ ಇರಲಿಲ್ಲವಾದ್ದರಿಂದ ಕುಟುಂಬದವರು ಮಾಲು ಅವರನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ಸಾವಿಗೀಡಾದರೆಂದು ತಿಳಿದು ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು. ಸಂಬಂಧಿಕರು ಮತ್ತು ಆಪ್ತರಿಗೆ ಅಂತ್ಯಕ್ರಿಯೆಯ ವಿಷಯ ಮಟ್ಟಿಸಿದ್ದರು. ಸವದತ್ತಿ ಯಲ್ಲಮ್ಮನಗುಡ್ಡಕ್ಕೆ ಹೋಗಿದ್ದ ಗ್ರಾಮದ ಕೆಲವರು ಪ್ರವಾಸ ಮೊಟಕುಗೊಳಿಸಿ ವಾಪಸಾಗಿದ್ದರು. ಈ ನಡುವೆ, ಮಹಿಳೆಗೆ ಪ್ರಜ್ಞೆ ಬಂದಿದ್ದರಿಂದ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.