ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವದತ್ತಿ ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತಸಾಗರ: ಮಹಿಳೆಯರೇ ಹೆಚ್ಚು

ಶಕ್ತಿದೇವತೆಯರ ದರ್ಶನಕ್ಕೆ ನೆರವಾದ ‘ಶಕ್ತಿ’ ಯೋಜನೆ
Published 18 ಜೂನ್ 2023, 12:47 IST
Last Updated 18 ಜೂನ್ 2023, 12:47 IST
ಅಕ್ಷರ ಗಾತ್ರ

ಉಗರಗೋಳ(ಬೆಳಗಾವಿ ಜಿಲ್ಲೆ): ಮಣ್ಣೆತ್ತಿನ ಅಮವಾಸ್ಯೆ ಹಾಗೂ ‘ಶಕ್ತಿ’ ಯೋಜನೆ ಹಿನ್ನೆಲೆಯಲ್ಲಿ ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡಕ್ಕೆ ಭಾನುವಾರ ಭಕ್ತಸಾಗರವೇ ಹರಿದುಬಂದಿತ್ತು. ಮಹಿಳೆಯರ ಸಂಖ್ಯೆ ಹೆಚ್ಚಿತ್ತು.

ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಯಲ್ಲಮ್ಮನ ಸನ್ನಿಧಿಗೆ ಬಂದಿಳಿದರು. ಯಲ್ಲಮ್ಮನಗುಡ್ಡ ಮಾರ್ಗವಾಗಿ ಸಂಚರಿಸುವ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕಿದವು.

‘ಶಕ್ತಿ ಯೋಜನೆಯಡಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಕೊಟ್ಟಿದ್ದಕ್ಕೆ ಯಲ್ಲಮ್ಮನಗುಡ್ಡಕ್ಕೆ ಬಂದಿದ್ದೇವೆ. ಶಕ್ತಿದೇವತೆ ದರ್ಶನ ಪಡೆಯಲು ಶಕ್ತಿ ಯೋಜನೆ ನೆರವಾಗಿದೆ’ ಎಂದು ಕಲಬುರಗಿಯ ಜೋಗತಿ ದೇವಮ್ಮ ಹೇಳಿದರು.

ಬೆಳಗಾವಿ ತಾಲ್ಲೂಕಿನ ಸುಳೇಭಾವಿಯ ಮಹಾಲಕ್ಷ್ಮಿ ದೇವಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿದರು. ಬೈಲಹೊಂಗಲದಿಂದ ಧರ್ಮಸ್ಥಳ, ಉಳವಿ, ಸೊಗಲ ಮತ್ತಿತರ ಧಾರ್ಮಿಕ ಸ್ಥಳಗಳಿಗೆ ಹೆಚ್ಚಿನ ಪ್ರಯಾಣಿಕರು ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT