<p><strong>ಬೆಳಗಾವಿ</strong>: 'ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಬೇಕು ಎಂದು ಯಾರಾದರೂ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದರೆ ಸದ್ಯ ಅದು ನಗಣ್ಯ. ಅದಕ್ಕೆ ನನ್ನ ಸಮ್ಮತಿಯೂ ಇಲ್ಲ' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. </p><p>ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂಥ ವಿಷಯವಲ್ಲ. ಸಿದ್ದರಾಮಯ್ಯ ಗಟ್ಟಿ ನಾಯಕರು. ಎಲ್ಲಿಯವರೆಗೆ ಹೈಕಮಾಂಡ್ ಬಯಸುವುದೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿ' ಎಂದರು.</p>.<p>'ಮುಡಾ' ಹಗರಣದಲ್ಲಿ ಬಿಜೆಪಿಯವರು ಸುಳ್ಳು ದಾಖಲೆ ಹುಟ್ಟಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯತ್ನ ನಡೆಸಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಎಲ್ಲ 135 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದೇವೆ. ನಾನು ಮೊದಲ ಮಹಿಳಾ ಮುಖ್ಯಮಂತ್ರಿ ಎಂದೆಲ್ಲ ಪ್ರಚಾರ ಮಾಡುವುದು ಬಾಲಿಷ' ಎಂದರು.</p><p>'ಸಿ.ಎಂ ಸ್ಥಾನದ ಆಕಾಂಕ್ಷಿ' ಎಂದು ಕೆಲ ನಾಯಕರು ಹೇಳಿಕೆ ನೀಡಿರಬಹುದು. ಆದರೆ, ನಾನು ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿ. ನಮ್ಮದು ಶಿಸ್ತಿನ ಪಕ್ಷ. ನಾವು ಬಯಸುವುದಲ್ಲ; ಪಕ್ಷ ಬಯಸಬೇಕು' ಎಂದು ವ್ಯಂಗ್ಯ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: 'ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಬೇಕು ಎಂದು ಯಾರಾದರೂ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದರೆ ಸದ್ಯ ಅದು ನಗಣ್ಯ. ಅದಕ್ಕೆ ನನ್ನ ಸಮ್ಮತಿಯೂ ಇಲ್ಲ' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. </p><p>ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂಥ ವಿಷಯವಲ್ಲ. ಸಿದ್ದರಾಮಯ್ಯ ಗಟ್ಟಿ ನಾಯಕರು. ಎಲ್ಲಿಯವರೆಗೆ ಹೈಕಮಾಂಡ್ ಬಯಸುವುದೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿ' ಎಂದರು.</p>.<p>'ಮುಡಾ' ಹಗರಣದಲ್ಲಿ ಬಿಜೆಪಿಯವರು ಸುಳ್ಳು ದಾಖಲೆ ಹುಟ್ಟಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯತ್ನ ನಡೆಸಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಎಲ್ಲ 135 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದೇವೆ. ನಾನು ಮೊದಲ ಮಹಿಳಾ ಮುಖ್ಯಮಂತ್ರಿ ಎಂದೆಲ್ಲ ಪ್ರಚಾರ ಮಾಡುವುದು ಬಾಲಿಷ' ಎಂದರು.</p><p>'ಸಿ.ಎಂ ಸ್ಥಾನದ ಆಕಾಂಕ್ಷಿ' ಎಂದು ಕೆಲ ನಾಯಕರು ಹೇಳಿಕೆ ನೀಡಿರಬಹುದು. ಆದರೆ, ನಾನು ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿ. ನಮ್ಮದು ಶಿಸ್ತಿನ ಪಕ್ಷ. ನಾವು ಬಯಸುವುದಲ್ಲ; ಪಕ್ಷ ಬಯಸಬೇಕು' ಎಂದು ವ್ಯಂಗ್ಯ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>