ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸ್ವಾವಲಂಬಿ ರಾಷ್ಟ್ರ ನಿರ್ಮಾಣದಲ್ಲಿ ದೇಶಿಯ ತಂತ್ರಜ್ಞಾನಗಳು ಮಹತ್ತರ ಪಾತ್ರ ವಹಿಸುತ್ತವೆ. ಇದು ನಮ್ಮ ರಾಷ್ಟ್ರದ ಜ್ಞಾನಶಕ್ತಿಯನ್ನು ಜಗತ್ತಿಗೆ ಪರಿಚಯಿಸುವುದಲ್ಲದೆ, ಅಸಂಖ್ಯಾತ ಉದ್ಯೋಗಗಳನ್ನು ಹುಟ್ಟುಹಾಕುತ್ತವೆ. ಈ ತಂತ್ರಜ್ಞಾನಗಳಿಂದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಜತೆಗೆ, ಬೇರೆ ರಾಷ್ಟ್ರಗಳ ತಂತ್ರಜ್ಞಾನದ ಮೇಲಿನ ಅವಲಂಬನೆ ಕಡಿಮೆಯಾಗುತ್ತದೆ. ತಂತಜ್ಞಾನ ಆಮದು ಕಡಿಮೆಯಾಗಿ, ಆರ್ಥಿಕ ಹೊರೆ ತಗ್ಗುತ್ತದೆ’ ಎಂದರು.