ಸ.ಜ. ನಾಗಲೋಟಿಮಠ ವಿಜ್ಞಾನ ಕೇಂದ್ರದ ಯೋಜನಾ ಸಹಾಯಕ ರಾಜಶೇಖರ ಪಾಟೀಲ ಮಾತನಾಡಿ, ‘ವಿಶ್ವದಲ್ಲಿ 66 ಲಕ್ಷದಷ್ಟು ಜನರು ಕುಡಿಯಲು ಯೋಗ್ಯವಾದ ನೀರಿಲ್ಲದೇ ಬಳಲುತ್ತಿದ್ದಾರೆ. ಹಲವರು ಕಲುಷಿತ ನೀರು ಸೇವಿಸಿ ಅನೇಕ ರೋಗರುಜಿನಗಳಿಗೆ ತುತ್ತಾಗುತ್ತಿದ್ದಾರೆ. ಹೀಗಾಗಿ, ಜಲ ಹಾಗೂ ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಪ್ರತಿಯೊಬ್ಬರು ಕನಿಷ್ಠ ಶೇ 10ರಷ್ಟು ನೀರು ಉಳಿಸಬಹುದಾದ ಸುಲಭ ವಿಧಾನಗಳನ್ನು ಅನುಸರಿಸಬೇಕು’ ಎಂದರು.