ಬೆಳಗಾವಿ: ‘ಜನರಿಂದ ಮನ್ನಣೆಗೆ ಒಳಗಾಗುವ ಸಾಹಿತಿಗಳು ಸಮಾಜಕ್ಕೆ ಬದ್ಧರಾಗಿ ಬರೆಯಬೇಕು. ರೈತರು, ಮಹಿಳೆಯರು, ದಲಿತರು ಮತ್ತು ತುಳಿತಕ್ಕೆ ಒಳಗಾದ ಸಮುದಾಯದ ಪರವಾಗಿ ಹಾಗೂ ಅವರ ದನಿಯಾಗಿ ಸಾಹಿತ್ಯ ರಚಿಸಿ, ಬದುಕಿನಲ್ಲೂ ಆ ಬದ್ಧತೆಯನ್ನು ಪ್ರದರ್ಶಿಸಬೇಕು’ ಎಂದು ಬಂಡಾಯ ಸಾಹಿತಿ ಡಾ.ಯಲ್ಲಪ್ಪ ಹಿಮ್ಮಡಿ ಹೇಳಿದರು.