<p><strong>ಬೈಲಹೊಂಗಲ</strong>: ಸಮೀಪದ ಹೊಸ ಯಕ್ಕುಂಡಿಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಇಲ್ಲಿನ ಪೀರ ದಿಲಾವರ ಗೋರಿ ಶಾಹವಲಿ ಸಂದಲ್ ಮತ್ತು ಉರುಸ್ ಅಂಗವಾಗಿ ಸುತ್ತಲಿನ ಹತ್ತೂರಿನ ಜನ ಸಂತಸದಲ್ಲಿದ್ದಾರೆ.</p>.<p>ಹೊಸ ಯಕ್ಕುಂಡಿ, ಧೂಪದಾಳ, ಕಾರ್ಲಕಟ್ಟಿ ಹಾಗೂ ಕಾರ್ಲಕಟ್ಟಿ ತಾಂಡಾ ಒಂದಕ್ಕೊಂದು ಹೊಂದಿಕೊಂಡಿವೆ. ಇವುಗಳಲ್ಲದೇ ಸುತ್ತ ಮುತ್ತಲಿನ ಗ್ರಾಮದ ಜನರೂ ಉರುಸ್ನಲ್ಲಿ ಭಾಗಿಯಾಗುವುದು ವಾಡಿಕೆ. ಪ್ರತಿಬಾರಿಯಂತೆ ಈ ಬಾರಿಯೂ ಉರುಸ್ನ ಪ್ರಮುಖ ಆಕರ್ಷಣೆಯಾದ ಸಂದಲ್ ಮೆರವಣಿಗೆಗೆ ಗುರುವಾರ ಸಂಜೆ ಚಾಲನೆ ನೀಡಲಾಯಿತು.</p>.<p>ಬುಧವಾರ ರಾತ್ರಿ ಧೂಪದಾಳ ಗ್ರಾಮದ ಹಿರಿಯ ಮೋಹನರಾವ ದೇಸಾಯಿ ಅವರ ಮನೆಯಿಂದ ಸಕಲ ವಾದ್ಯಮೇಳದೊಂದಿಗೆ ಗಂಧದ ಭವ್ಯ ಮೆರವಣಿಗೆ ನಡೆಯಿತು. ಕುಮಾರೇಶ್ವರ ವಿರಕ್ತಮಠದ ಪಂಚಾಕ್ಷರ ಸ್ವಾಮೀಜಿ, ಮುಸ್ಲಿಂ ಧರ್ಮಗುರು ಮುರಷಿದಪೀರಾ ಪೀರಜಾದೆ ನೇತೃತ್ವದಲ್ಲಿ ಗುರು– ಹಿರಿಯರ ಸಮ್ಮುಖದಲ್ಲಿ ವಲಿಗಳಿಗೆ ಗಂಧ ಏರಿಸಲಾಯಿತು. ಈ ಮೂಲಕ ದರ್ಗಾದ ಉರುಸ್ಗೆ ಚಾಲನೆ ನೀಡಲಾಯಿತು.</p>.<p><strong>ಇತಿಹಾಸ: </strong>ಮಲಪ್ರಭಾ ನದಿ ದಡದಲ್ಲಿರುವ ಯಕ್ಕುಂಡಿ ಗ್ರಾಮ ತನ್ನದೇ ಆದ ಐತಿಹಾಸಿಕ, ಧಾರ್ಮಿಕ, ಪರಂಪರೆಗೆ ಹೆಸರಾಗಿದೆ. ಇತಿಹಾಸದ ಪುಟಗಳಲ್ಲಿ ‘ಯಜ್ಞಕುಂಡ’ ಎಂದೇ ಪ್ರಸಿದ್ಧಿ ಪಡೆದ ಈ ಊರಿಗೆ ಬಂದ ಪೀರ ದಿಲಾವರಗೋರಿ ಶಾಹವಲಿ ಬಾಬಾ ಅವರು, ಅಲ್ಲಾಹುವಿನ ಸಂದೇಶ ಸಾರುತ್ತ ಬಂದು ನೆಲೆಸಿದ್ದು ಇತಿಹಾಸ. ಯಕ್ಕುಂಡಿ– ಧೂಪದಾಳ ನಡುವೆ ಚಿಕ್ಕ ಗುಡಿಸಲು ಹಾಕಿಕೊಂಡು ವಾಸವಾಗಿದ್ದರು.</p>.<p>ಅಲ್ಲಯೇ ಕಾಲವಾದ ನಂತರ ಗ್ರಾಮಸ್ಥರು ಅವರ ದರ್ಗಾ ನಿರ್ಮಿಸಿದ್ದಾರೆ. ಹೀಗಾಗಿ, ಯಾವುದೇ ಧರ್ಮ, ಜಾತಿಯ ಕಟ್ಟುಪಾಡು ಇಲ್ಲದೇ ಎಲ್ಲರೂ ಈ ಸಂತರಿಗೆ ಭಕ್ತರಾದರು.</p>.<p>ಹಿರಿಯರಾದ ಶಂಕರಗೌಡ ಪಾಟೀಲ, ಬಸವರಾಜ ಹೊಂಗಲ, ವಿನೋದರಾವ ದೇಸಾಯಿ, ಅಬ್ದುಲ್ ಖಾದರ ಜೈಲಾನಿ ಬಾರಿಗಿಡದ, ಮೋಹನ ಮೇಟಿ, ನಾಗಪ್ಪ ಹಿಟ್ಟಣಗಿ, ಬಂದೆನಮಾಜ ಮುಲ್ಲಾ, ಮಕ್ತುಮಸಾ ಬಡೇಖಾನ್, ಇಸ್ಮಾಯಿಲ್ ಮುಜಾವರ, ಅಕ್ಬರಸಾಬ್ ಬಾರಿಗಿಡದ, ಚನ್ನಪ್ಪ ಹೊಂಗಲ, ಗಂಗಪ್ಪ ಪೂಜೇರ, ಮುಕ್ತಾರ ಮುಲ್ಲಾ ಅವರು ಈ ಬಾರಿ ಉರುಸ್ ನೇತೃತ್ವ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ</strong>: ಸಮೀಪದ ಹೊಸ ಯಕ್ಕುಂಡಿಯಲ್ಲಿ ಈಗ ಸಂಭ್ರಮ ಮನೆ ಮಾಡಿದೆ. ಇಲ್ಲಿನ ಪೀರ ದಿಲಾವರ ಗೋರಿ ಶಾಹವಲಿ ಸಂದಲ್ ಮತ್ತು ಉರುಸ್ ಅಂಗವಾಗಿ ಸುತ್ತಲಿನ ಹತ್ತೂರಿನ ಜನ ಸಂತಸದಲ್ಲಿದ್ದಾರೆ.</p>.<p>ಹೊಸ ಯಕ್ಕುಂಡಿ, ಧೂಪದಾಳ, ಕಾರ್ಲಕಟ್ಟಿ ಹಾಗೂ ಕಾರ್ಲಕಟ್ಟಿ ತಾಂಡಾ ಒಂದಕ್ಕೊಂದು ಹೊಂದಿಕೊಂಡಿವೆ. ಇವುಗಳಲ್ಲದೇ ಸುತ್ತ ಮುತ್ತಲಿನ ಗ್ರಾಮದ ಜನರೂ ಉರುಸ್ನಲ್ಲಿ ಭಾಗಿಯಾಗುವುದು ವಾಡಿಕೆ. ಪ್ರತಿಬಾರಿಯಂತೆ ಈ ಬಾರಿಯೂ ಉರುಸ್ನ ಪ್ರಮುಖ ಆಕರ್ಷಣೆಯಾದ ಸಂದಲ್ ಮೆರವಣಿಗೆಗೆ ಗುರುವಾರ ಸಂಜೆ ಚಾಲನೆ ನೀಡಲಾಯಿತು.</p>.<p>ಬುಧವಾರ ರಾತ್ರಿ ಧೂಪದಾಳ ಗ್ರಾಮದ ಹಿರಿಯ ಮೋಹನರಾವ ದೇಸಾಯಿ ಅವರ ಮನೆಯಿಂದ ಸಕಲ ವಾದ್ಯಮೇಳದೊಂದಿಗೆ ಗಂಧದ ಭವ್ಯ ಮೆರವಣಿಗೆ ನಡೆಯಿತು. ಕುಮಾರೇಶ್ವರ ವಿರಕ್ತಮಠದ ಪಂಚಾಕ್ಷರ ಸ್ವಾಮೀಜಿ, ಮುಸ್ಲಿಂ ಧರ್ಮಗುರು ಮುರಷಿದಪೀರಾ ಪೀರಜಾದೆ ನೇತೃತ್ವದಲ್ಲಿ ಗುರು– ಹಿರಿಯರ ಸಮ್ಮುಖದಲ್ಲಿ ವಲಿಗಳಿಗೆ ಗಂಧ ಏರಿಸಲಾಯಿತು. ಈ ಮೂಲಕ ದರ್ಗಾದ ಉರುಸ್ಗೆ ಚಾಲನೆ ನೀಡಲಾಯಿತು.</p>.<p><strong>ಇತಿಹಾಸ: </strong>ಮಲಪ್ರಭಾ ನದಿ ದಡದಲ್ಲಿರುವ ಯಕ್ಕುಂಡಿ ಗ್ರಾಮ ತನ್ನದೇ ಆದ ಐತಿಹಾಸಿಕ, ಧಾರ್ಮಿಕ, ಪರಂಪರೆಗೆ ಹೆಸರಾಗಿದೆ. ಇತಿಹಾಸದ ಪುಟಗಳಲ್ಲಿ ‘ಯಜ್ಞಕುಂಡ’ ಎಂದೇ ಪ್ರಸಿದ್ಧಿ ಪಡೆದ ಈ ಊರಿಗೆ ಬಂದ ಪೀರ ದಿಲಾವರಗೋರಿ ಶಾಹವಲಿ ಬಾಬಾ ಅವರು, ಅಲ್ಲಾಹುವಿನ ಸಂದೇಶ ಸಾರುತ್ತ ಬಂದು ನೆಲೆಸಿದ್ದು ಇತಿಹಾಸ. ಯಕ್ಕುಂಡಿ– ಧೂಪದಾಳ ನಡುವೆ ಚಿಕ್ಕ ಗುಡಿಸಲು ಹಾಕಿಕೊಂಡು ವಾಸವಾಗಿದ್ದರು.</p>.<p>ಅಲ್ಲಯೇ ಕಾಲವಾದ ನಂತರ ಗ್ರಾಮಸ್ಥರು ಅವರ ದರ್ಗಾ ನಿರ್ಮಿಸಿದ್ದಾರೆ. ಹೀಗಾಗಿ, ಯಾವುದೇ ಧರ್ಮ, ಜಾತಿಯ ಕಟ್ಟುಪಾಡು ಇಲ್ಲದೇ ಎಲ್ಲರೂ ಈ ಸಂತರಿಗೆ ಭಕ್ತರಾದರು.</p>.<p>ಹಿರಿಯರಾದ ಶಂಕರಗೌಡ ಪಾಟೀಲ, ಬಸವರಾಜ ಹೊಂಗಲ, ವಿನೋದರಾವ ದೇಸಾಯಿ, ಅಬ್ದುಲ್ ಖಾದರ ಜೈಲಾನಿ ಬಾರಿಗಿಡದ, ಮೋಹನ ಮೇಟಿ, ನಾಗಪ್ಪ ಹಿಟ್ಟಣಗಿ, ಬಂದೆನಮಾಜ ಮುಲ್ಲಾ, ಮಕ್ತುಮಸಾ ಬಡೇಖಾನ್, ಇಸ್ಮಾಯಿಲ್ ಮುಜಾವರ, ಅಕ್ಬರಸಾಬ್ ಬಾರಿಗಿಡದ, ಚನ್ನಪ್ಪ ಹೊಂಗಲ, ಗಂಗಪ್ಪ ಪೂಜೇರ, ಮುಕ್ತಾರ ಮುಲ್ಲಾ ಅವರು ಈ ಬಾರಿ ಉರುಸ್ ನೇತೃತ್ವ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>