17ರಂದು ಸಂಜೆ 6.30ಕ್ಕೆ ‘ಘಟ್ಟ ಸ್ಥಾಪನೆ’ (ಹಣತೆಗಳನ್ನು ಬೆಳಗಿಸಲು) ಕಾರ್ಯಕ್ರಮ ನಡೆಯಲಿದೆ. ಒಂಭತ್ತು ದಿನಗಳವರೆಗೆ ನಿತ್ಯ ಬೆಳಿಗ್ಗೆ ಮತ್ತು ಸಂಜೆ ದೇವಿಗೆ ವಿಶೇಷ ಪೂಜೆ, ಅಲಂಕಾರ, ಅಭಿಷೇಕ ಮತ್ತು ನೈವೇದ್ಯ ಕಾರ್ಯಕ್ರಮವಿದೆ. ‘ಕೋವಿಡ್ ನಿಯಂತ್ರಣ ಮಾರ್ಗಸೂಚಿ ಅನುಸಾರ ಅಧಿಕಾರಿಗಳು, ಅರ್ಚಕರು ಹಾಗೂ ಕೆಲವೇ ಗಣ್ಯರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ’ ಎಂದು ದೇವಸ್ಥಾನದ ಇಒ ರವಿ ಕೋಟಾರಗಸ್ತಿ ತಿಳಿಸಿದ್ದಾರೆ.