<p><strong>ಉಗರಗೋಳ</strong>: ಯಲ್ಲಮ್ಮನ ಗುಡ್ಡದಲ್ಲಿ ₹21 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪರಶುರಾಮ ವಸತಿ ನಿಲಯ ಉದ್ಘಾಟನೆಗೆ ಸಜ್ಜಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28ರಂದು ಮಧ್ಯಾಹ್ನ 12ಕ್ಕೆ ಇದನ್ನು ಭಕ್ತರಿಗೆ ಸಮರ್ಪಣೆ ಮಾಡಲಿದ್ದಾರೆ.</p>.<p>ಸದ್ಯ ಜನರ ವಸತಿಗಾಗಿ 100 ಕೊಠಡಿಗಳಿವೆ. ಹೆಚ್ಚಿನ ಭಕ್ತರು ಗುಡ್ಡದ ವಿಶಾಲವಾದ ಪರಿಸರದಲ್ಲೇ ವಾಸ್ತವ್ಯ ಹೂಡುತ್ತಿದ್ದಾರೆ. ಕೆಲ ಸಂದರ್ಭದಲ್ಲಿ ಭಕ್ತರಿಗೆ ವಸತಿ ಸಮಸ್ಯೆಯಾಗುತ್ತಿದೆ. ಇದನ್ನು ಮನಗಂಡ ಸರ್ಕಾರ 2013ರಲ್ಲಿ 246 ಕೊಠಡಿಗಳುಳ್ಳ ವಸತಿ ನಿಲಯ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿತ್ತು.</p>.<p>‘ಶಾಸಕರಾಗಿದ್ದ ಆನಂದ ಮಾಮನಿ ಪ್ರಯತ್ನದಿಂದಾಗಿ ವಸತಿ ನಿಲಯ ನಿರ್ಮಾಣವಾಗಿದೆ. ಇಲ್ಲಿ ಶುಚಿತ್ವಕ್ಕೆ ಒತ್ತು ಕೊಡುತ್ತೇವೆ’ ಎಂದು ಯಲ್ಲಮ್ಮ ದೇವಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ ತಿಳಿಸಿದ್ದಾರೆ.</p>.<p>‘ಈ ವಸತಿ ನಿಲಯದಲ್ಲಿ ಶುದ್ಧ ಕುಡಿಯುವ ನೀರು, ಶೌಚಗೃಹ ಸೌಕರ್ಯವಿದೆ. ಇದೇ ವಾರದಿಂದ ವಸತಿ ನಿಲಯವನ್ನು ಬಳಕೆಗೆ ಮುಕ್ತಗೊಳಿಸಲಿದ್ದು, ಭಕ್ತರಿಗೆ ಅನುಕೂಲವಾಗಲಿದೆ’ ಎಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಪಿ.ಬಿ.ಮಹೇಶ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಗರಗೋಳ</strong>: ಯಲ್ಲಮ್ಮನ ಗುಡ್ಡದಲ್ಲಿ ₹21 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಪರಶುರಾಮ ವಸತಿ ನಿಲಯ ಉದ್ಘಾಟನೆಗೆ ಸಜ್ಜಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28ರಂದು ಮಧ್ಯಾಹ್ನ 12ಕ್ಕೆ ಇದನ್ನು ಭಕ್ತರಿಗೆ ಸಮರ್ಪಣೆ ಮಾಡಲಿದ್ದಾರೆ.</p>.<p>ಸದ್ಯ ಜನರ ವಸತಿಗಾಗಿ 100 ಕೊಠಡಿಗಳಿವೆ. ಹೆಚ್ಚಿನ ಭಕ್ತರು ಗುಡ್ಡದ ವಿಶಾಲವಾದ ಪರಿಸರದಲ್ಲೇ ವಾಸ್ತವ್ಯ ಹೂಡುತ್ತಿದ್ದಾರೆ. ಕೆಲ ಸಂದರ್ಭದಲ್ಲಿ ಭಕ್ತರಿಗೆ ವಸತಿ ಸಮಸ್ಯೆಯಾಗುತ್ತಿದೆ. ಇದನ್ನು ಮನಗಂಡ ಸರ್ಕಾರ 2013ರಲ್ಲಿ 246 ಕೊಠಡಿಗಳುಳ್ಳ ವಸತಿ ನಿಲಯ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿತ್ತು.</p>.<p>‘ಶಾಸಕರಾಗಿದ್ದ ಆನಂದ ಮಾಮನಿ ಪ್ರಯತ್ನದಿಂದಾಗಿ ವಸತಿ ನಿಲಯ ನಿರ್ಮಾಣವಾಗಿದೆ. ಇಲ್ಲಿ ಶುಚಿತ್ವಕ್ಕೆ ಒತ್ತು ಕೊಡುತ್ತೇವೆ’ ಎಂದು ಯಲ್ಲಮ್ಮ ದೇವಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ ತಿಳಿಸಿದ್ದಾರೆ.</p>.<p>‘ಈ ವಸತಿ ನಿಲಯದಲ್ಲಿ ಶುದ್ಧ ಕುಡಿಯುವ ನೀರು, ಶೌಚಗೃಹ ಸೌಕರ್ಯವಿದೆ. ಇದೇ ವಾರದಿಂದ ವಸತಿ ನಿಲಯವನ್ನು ಬಳಕೆಗೆ ಮುಕ್ತಗೊಳಿಸಲಿದ್ದು, ಭಕ್ತರಿಗೆ ಅನುಕೂಲವಾಗಲಿದೆ’ ಎಂದು ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಪಿ.ಬಿ.ಮಹೇಶ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>